ಶಿವಮೊಗ್ಗ ಜಂಬೂ ಸವಾರಿಗೆ ಎರಡೇ ಆನೆ, ತಾಲೀಮು ಇಲ್ಲದೆ ಅಖಾಡಕ್ಕೆ ಇಳಿಸುತ್ತಿದೆ ಪಾಲಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಅಕ್ಟೋಬರ್ 2021

ಘಟನೆ 1 :

ಶ್ರೀರಂಗಪಟ್ಟಣದ ದಸರಾ ಮೆರವಣಿಗೆಯಲ್ಲಿ ಗೋಪಾಲಸ್ವಾಮಿ ಎಂಬ ಆನೆ ಗಾಬರಿಯಾಗಿತ್ತು. ಪಟಾಕಿ ಶಬ್ದದಿಂದ ವಿಚಲಿತವಾದ ಗೋಪಾಲಸ್ವಾಮಿ ಆನೆ ಅಂಬಾರಿಯೊಂದಿಗೆ ತಿರುಗಿ ನಿಂತಿತ್ತು. ಇದರಿಂದ ಕೆಲಕ್ಷಣ ಗೊಂದಲ ಮತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.

ಘಟನೆ 2 :

2016ರಲ್ಲಿ ಶಿವಮೊಗ್ಗದಲ್ಲಿ ಅಂಬಾರಿ ಹೊತ್ತು ನಿಲ್ಲುತ್ತಿದ್ದಂತೆ ಸಾಗರ ಆನೆಯ ಆರೋಗ್ಯದಲ್ಲಿ ವ್ಯತ್ಯಾಸವಾಯಿತು. ಬಳಿಕ ಆನೆ ಬದಲು ಲಾರಿಯಲ್ಲಿ ನಾಡದೇವಿ ಚಾಮುಂಡೇಶ್ವರಿ ಇರುವ ಅಂಬಾರಿಯ ಮೆರವಣಿಗೆ ನಡೆಸಲಾಯಿತು.

ಇದನ್ನು ಓದಿ | ಜನರ ದುಡ್ಡಲ್ಲಿ ಶಿವಮೊಗ್ಗ ದಸರಾ, ಜನರಿಗೇನೆ ಮಾಹಿತಿ ಇಲ್ಲ, ಪಾಲಿಕೆ ಸದಸ್ಯರು, ಅಧಿಕಾರಿಗಳಿಗಷ್ಟೇನಾ ಕಾರ್ಯಕ್ರಮ?

ಈ ಭಾರಿಯೂ ಶಿವಮೊಗ್ಗದಲ್ಲಿ ಜಂಬೂ ಸವಾರಿ ನಡೆಯಲಿದೆ. ಸಕ್ರೆಬೈಲು ಬಿಡಾರದ ಸಾಗರ ಮತ್ತು ಭಾನುಮತಿ ಆನೆಗಳು ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿವೆ. ಮೇಲಿನ ಎರಡು ಘಟನೆಗಳ ಬಗ್ಗೆ ಗೊತ್ತಿದ್ದರೂ, ಶಿವಮೊಗ್ಗ ಪಾಲಿಕೆ ತಾಲೀಮು ನಡೆಸದೆ ಈ ಆನೆಗಳನ್ನು ಆಖಾಡಕ್ಕೆ ಇಳಿಸುತ್ತಿದೆ.

ತಾಲೀಮು ಇಲ್ಲದ ಜಂಬೂ ಸವಾರಿ

ಮೈಸೂರು ದಸರಾ ಜಗದ್ವಿಖ್ಯಾತಿ ಗಳಿಸಿದೆ. ಜಂಬೂ ಸವಾರಿ ಕಣ್ತುಂಬಿಕೊಳ್ಳಲು ದೇಶ, ವಿದೇಶದ ಜನರು ಬರುತ್ತಾರೆ. ಜಂಬೂ ಸವಾರಿ ಸಂದರ್ಭ ಆನೆಗಳು ವಿಚಲಿತವಾಗಬಾರದು, ಗಾಬರಿಗೊಳ್ಳಬಾರದು ಎಂಬ ಕಾರಣಕ್ಕೆ ವಾರಗಟ್ಟಲೆ ಜಂಬೂ ಸವಾರಿಯ ತಾಲೀಮು ನಡೆಸಲಾಗುತ್ತದೆ. ಸಿಡಿಮದ್ದು ಸಿಡಿಸಿ ಆನೆಗಳಲ್ಲಿ ಭಯ ಹೋಗಲಾಡಿಸಲಾಗುತ್ತದೆ. ಆದರೆ ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಈ ತನಕ ತಾಲೀಮು ಆಗಿಲ್ಲ.

ADVT JULY NANJAPPA HOSPITAL HOME LAB TESTING

ಎಲ್ಲವೂ ಲೇಟ್ ಲೇಟ್

ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಸಕ್ರೆಬೈಲು ಬಿಡಾರದಿಂದ ಆನೆಗಳು ಬರುತ್ತವೆ. ಪ್ರತಿ ಭಾರಿ ಬಿಡಾರದ ಅತ್ಯಂತ ಸೌಮ್ಯ ಸ್ವಭಾವದ ಸಾಗರ ಆನೆಯು ನಾಡದೇವಿ ಚಾಮುಂಡೇಶ್ವರಿ ಮೂರ್ತಿ ಮತ್ತು ಅಂಬಾರಿಯನ್ನು ಹೊರುತ್ತಿದೆ. ಈ ಭಾರಿಯು ಸಾಗರ ಆನೆಯೇ ಅಂಬಾರಿ ಹೊರಲಿದೆ. ಭಾನುಮತಿ ಆನೆಯು ಪಾಲ್ಗೊಳ್ಳಲಿದೆ. ಕಡೆ ಕ್ಷಣದಲ್ಲಿ ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆ ಆನೆಗಳು ಶಿವಮೊಗ್ಗಕ್ಕೆ ಬರಲು ಸಜ್ಜಾಗಿವೆ.

ನಿತ್ಯ ಒಂದಿಲ್ಲೊಂದು ಗೊಂದಲ

ಶಿವಮೊಗ್ಗದ ಮಟ್ಟಿಗೆ ಆರಂಭದಿಂದಲೂ ಒಂದಿಲ್ಲೊಂದು ಗೊಂದಲಗಳ ನಡುವೆಯೇ ಸಾಗಿಕೊಂಡು ಬರುತ್ತಿದೆ. ಇನ್ನೇನು ಹಬ್ಬ ಒಂದು ವಾರವಿದೆ ಎನ್ನುವಾಗ ಆನೆಗಳನ್ನು ಕಳುಹಿಸುವಂತೆ ಕೋರಲಾಗುತ್ತದೆ. ಅದು ಸರಕಾರದ ಹಂತದಿಂದ ದಾಟಿ ಬರುವ ಹೊತ್ತಿಗೆ ಭಾರಿ ವಿಳಂಬವಾಗುತ್ತಿದೆ. ಈ ವರ್ಷವೂ ಅದೇ ಆಗಿದೆ.

AVvXsEicTqO0vbJ0ySeSdqaPaiUTw z0sN1roD7qGtCW379X32bku3UKEIQwE0YpyfwdvpfAULOsn8MGjZDZ18pDto7Gf6Ql937aSnUCzxTUM19Ez8nPdGlPCLfN9uuJZ25GoJZTi TVk30k64PjiDq8PhbemY5j8DesqNnIuFIvUF mtqfaivdHyNL4iV3oZg=s926

ತಾಲೀಮು ನಡೆಸಲು ಟೈಮೆ ಇಲ್ಲ

ಈ ಭಾರಿ ಜಂಬೂ ಸವಾರಿಗೆ ಪೂರಕವಾದ ತಯಾರಿಯೇ ಆಗಿಲ್ಲ. ಪಾಲಿಕೆಯ ನಿಧಾನಗತಿ ಮತ್ತು ಗೊಂದಲದ ನಿರ್ಧಾರದಿಂದಾಗಿ ಅರಣ್ಯಾಧಿಕಾರಿಗಳು ಕೂಡ ಸಮಸ್ಯೆಗೆ ಸಿಲುಕಿದ್ದಾರೆ. ಕೊನೆ ಕ್ಷಣದವರೆಗೆ ಯಾವ ಆನೆಗಳು ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿವೆ ಎಂಬುದು ನಿರ್ಧಾರವಾಗಿರಲಿಲ್ಲ. ಹಾಗಾಗಿ ಈ ಭಾರಿ ತಾಲೀಮು ನಡೆದಿಲ್ಲ. ಪ್ರತಿ ವರ್ಷ ಸಕ್ರೆಬೈಲು ಆನೆಬಿಡಾರದಲ್ಲಾದರೂ ಮರಳಿನ ಚೀಲ ತುಂಬಿ ತಾಲೀಮು ನೀಡಲಾಗುತಿತ್ತು. ಆದರೆ, ಈ ಸಲ ವಿಜಯ ದಶಮಿಗೆ ಮೂರು ದಿನವಿರುವಾಗ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ್ಯಾವುದು ಅನ್ನುವುದು ನಿರ್ಧಾರವಾಗಿದೆ.

1632381453891714 0

ನಗರಕ್ಕೆ ಹೊಂದಿಕೊಳ್ಳಬೇಕು, ಆರೋಗ್ಯವು ನೋಡಬೇಕು

ಸಾಕಾನೆಗಳಾದರೂ ನಿತ್ಯ ಕಾಡಿನಲ್ಲೇ ಇರುತ್ತವೆ. ಈ ಆನೆಗಳು ಪಟ್ಟಣದ ವಾತಾವರಣಕ್ಕೆ ಹೊಂದಿಕೊಳ್ಳಬೇಕು. ವಾಹನಗಳ ಶಬ್ದ, ಕಲಾ ತಂಡಗಳ ತಮಟೆ, ಡೊಳ್ಳು ವಾದ್ಯಗಳ ಸೌಂಡು, ಪಟಾಕಿಗಳ ಸ್ಪೋಟದ ಶಬ್ದಗಳು ಅಭ್ಯಾಸವಾಗಬೇಕು. ಇದೆ ಕಾರಣಕ್ಕೆ ಮೈಸೂರನಲ್ಲಿ ವಾರಗಟ್ಟಲೆ ತಾಲೀಮು ನಡೆಸಲಾಗುತ್ತದೆ. ಹೀಗಿದ್ದೂ, ಶ್ರೀರಂಗಪಟ್ಟಣ ದಸರಾದಲ್ಲಿ ಪಟಾಕಿ ಶಬ್ದಕ್ಕೆ ಆನೆ ಬೆದರದ ಘಟನೆ ಇನ್ನೂ ಹಸಿರಾಗಿದೆ.

AVvXsEiTru7NUgCASvpq81EAXpRHbjQnTe43qZ1hXDOX7sRWaAugaQjSUNneEVhou0Ak8m3yaQ8BjZKHNQHN 8 CnDWrcHxRqFsBOy 7oJcXIkgjhERUa6oEEjJTjHUqfeKixgUGBXQhxswwSFQ2TMhBFn fZqsgLFEQEYQYQTmPmtLfs MBpUqss9hi6D2CHA=s926

ಮತ್ತೊಂದೆಡೆ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಆರೋಗ್ಯವು ಮುಖ್ಯ. 2016ರ ದಸರಾ ವೇಳೆ ಅಂಬಾರಿ ಹೊರುತ್ತಿದ್ದಂತೆ ಸಾಗರ ಆನೆ ಆರೋಗ್ಯದಲ್ಲಿ ವ್ಯತ್ಯಾಸವಾಯಿತು. ಚಿಕಿತ್ಸೆ ನೀಡಿದರೂ ಸಾಗರ ಆನೆ ಅಂಬಾರಿ ಹೊರುವುದು ಕಷ್ಟ ಎಂದು ವೈದ್ಯರು ತಿಳಿಸಿದರು. ಹಾಗಾಗಿ ಅಂಬಾರಿಯನ್ನು ಲಾರಿಯಲ್ಲಿ ಇರಿಸಿ ಮೆರವಣಿಗೆ ನಡೆಸಲಾಯಿತು.

ಇದನ್ನು ಓದಿ | ಶಿವಮೊಗ್ಗದಲ್ಲಿ ಆಹಾರ ದಸರಾ, ಒಂದು ನಿಮಿಷದಲ್ಲಿ ಏಳು ಇಡ್ಲಿ ತಿಂದ ದೀಪಿಕಾ, 5 ಬಾಳೆಹಣ್ಣು ಸ್ವಾಹ ಮಾಡಿದ ಧನಲಕ್ಷ್ಮಿ

ಇವೆಲ್ಲವೂ ಮಹಾನಗರ ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನದಲ್ಲಿದೆ. ಆದರೂ ಪಟ್ಟು ಬಿಡದೆ ಆನೆಗಳನ್ನು ಜಂಬೂ ಸವಾರಿಗೆ ಕರೆಸುತ್ತಿದ್ದಾರೆ. ತಾಲೀಮು ಇಲ್ಲದೆಯೇ ಅಂಬಾರಿ ಹೊರೆಸಲು ಸಿದ್ಧವಾಗಿದ್ದಾರೆ.

ಏಕಾಏಕಿ ನಿರ್ಧಾರಕ್ಕೆ ಕಡಿವಾಣ ಬೀಳಬೇಕು

ಆನೆಯ ಎದೆಯ ಭಾಗಕ್ಕೆ ಚರ್ಮದ ಪಟ್ಟಿಯನ್ನು ಬಿಗಿಯಾಗಿ ಕಟ್ಟುವುದರಿಂದ ಎದೆನೋವು ಕಾಣಿಸಿಕೊಳ್ಳುತ್ತದೆ. ಊಟದಲ್ಲಿ ವ್ಯತ್ಯಾಸವಾದರೆ ಐದು ದಿನಗಳ ನಂತರ ಹೊಟ್ಟೆ ನೋವು, ಅಜೀರ್ಣದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದ್ಯಾವುದನ್ನೂ ಲೆಕ್ಕಿಸದೇ ಏಕಾಏಕಿ ಆನೆಗಳನ್ನು ದಸರಾಗೆ ಕರೆಯುತ್ತಿರುವ ಸಂಸ್ಕೃತಿಗೆ ತಡೆ ಬೀಳಬೇಕಿದೆ ಎನ್ನುವುದು ಪ್ರಾಣಿ ಪ್ರೇಮಿಗಳ ಅಭಿಪ್ರಾಯವಾಗಿದೆ.

AVvXsEi8Ac5ZsMIgS4Jz30esQXnANsyqm9IIwg nufI lektr jUlKUuz2As55HIMKzaVCSA mvi3ziJYrT6bh95Gghl41xeUHT4DKu4p30aRUJoWqJ283zKAkt4M4 uZKs5Mhybj YH8TOh0wmuu1WMMkIOKf4JU7gM IC2 ZFBa4 KlGL6c0GU9JI9z46Bw=s1466

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment