SHIVAMOGGA LIVE NEWS | 9 SEPTEMBER 2023
SHIMOGA : ಭದ್ರಾ ಅಚ್ಚುಕಟ್ಟು (Bhadra Dam) ವ್ಯಾಪ್ತಿಯಲ್ಲಿ ಭತ್ತ ಮತ್ತು ಅಧಿಕ ನೀರು ಬೇಡುವ ಯಾವ ಬೆಳೆಯನ್ನೂ ಬೆಳೆಯಬಾರದು ಎಂದು ನೀರಾವರಿ ಇಲಾಖೆ ಆದೇಶಿಸಿದೆ.
ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಬೇಸಿಗೆಯಲ್ಲಿ ಕುಡಿಯುವುದಕ್ಕೆ, ತೋಟಗಾರಿಕೆ ಹಾಗೂ ಇತರೆ ಬೆಳೆಗಳಿಗೆ ನೀರು ಸಂಗ್ರಹಿಸಿಡಬೇಕಿದೆ. ಆದ್ದರಿಂದ ಭತ್ತ ಹಾಗೂ ಇತರೆ ಬೆಳೆಗಳನ್ನು ಬೆಳೆಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ – BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?
ಭತ್ತದ ನಾಟಿ ಮಾಡಿ ನೀರಿಲ್ಲದೆ ಬೆಳೆ ನಷ್ಟವಾದರೆ ಅದಕ್ಕೆ ಇಲಾಖೆ ಹೊಣೆಯಲ್ಲ. ಅಚ್ಚುಕಟ್ಟು ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅರೆ ನೀರಾವರಿ ಬೆಳೆಗಳಿಗೆ ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಜಲಾಶಯದಿಂದ ನೀರಿನ ಸಂಗ್ರಹಕ್ಕೆ ಅನುಗುಣವಾಗಿ ನೀರನ್ನು ಹರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200