ಭತ್ತ, ಹೆಚ್ಚು ನೀರು ಬೇಡುವ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 SEPTEMBER 2023

SHIMOGA : ಭದ್ರಾ ಅಚ್ಚುಕಟ್ಟು (Bhadra Dam) ವ್ಯಾಪ್ತಿಯಲ್ಲಿ ಭತ್ತ ಮತ್ತು ಅಧಿಕ ನೀರು ಬೇಡುವ ಯಾವ ಬೆಳೆಯನ್ನೂ ಬೆಳೆಯಬಾರದು ಎಂದು ನೀರಾವರಿ ಇಲಾಖೆ ಆದೇಶಿಸಿದೆ.

ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ಬೇಸಿಗೆಯಲ್ಲಿ ಕುಡಿಯುವುದಕ್ಕೆ, ತೋಟಗಾರಿಕೆ ಹಾಗೂ ಇತರೆ ಬೆಳೆಗಳಿಗೆ ನೀರು ಸಂಗ್ರಹಿಸಿಡಬೇಕಿದೆ. ಆದ್ದರಿಂದ ಭತ್ತ ಹಾಗೂ ಇತರೆ ಬೆಳೆಗಳನ್ನು ಬೆಳೆಯದಂತೆ ಸೂಚಿಸಲಾಗಿದೆ‌.

ಇದನ್ನೂ ಓದಿ – BREAKING NEWS – ಭದ್ರಾ ನೀರು ನಿರ್ವಹಣಾ ಪ್ರಾಧಿಕಾರ ಸಭೆ, ಯಾರೆಲ್ಲ ಭಾಗಿಯಾಗಿದ್ದಾರೆ?

ಭತ್ತದ ನಾಟಿ ಮಾಡಿ ನೀರಿಲ್ಲದೆ ಬೆಳೆ ನಷ್ಟವಾದರೆ ಅದಕ್ಕೆ ಇಲಾಖೆ ಹೊಣೆಯಲ್ಲ. ಅಚ್ಚುಕಟ್ಟು ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅರೆ ನೀರಾವರಿ ಬೆಳೆಗಳಿಗೆ ಭದ್ರಾ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ಜಲಾಶಯದಿಂದ ನೀರಿನ ಸಂಗ್ರಹಕ್ಕೆ ಅನುಗುಣವಾಗಿ ನೀರನ್ನು ಹರಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment