SHIVAMOGGA LIVE NEWS | 13 FEBRUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಕೆಲ ವರ್ಷಗಳ ಹಿಂದೆ ಬಿಜೆಪಿಯಲ್ಲಿ ನಾಯಕರು ಇದ್ದರು. ಈಗ ಇರುವುದು ಕೇವಲ ಕಾಂಗರುಗಳು. ಅವರಿಗೆ ತಮ್ಮ ಮಕ್ಕಳಿಗೆ ಸುರಕ್ಷಿತವಾದ ವ್ಯವಸ್ಥೆ ಮಾಡುವುದಷ್ಟೇ ಚಿಂತೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ವ್ಯಂಗ್ಯವಾಡಿದರು.
ಬಿಜೆಪಿಯಲ್ಲಿ ಎಲ್ಲ ನಾಯಕರ ಮಕ್ಕಳಿಗೂ ಅಧಿಕಾರ ಸಿಕ್ಕಿದೆ. ಆದರೆ ನನ್ನ ಮಗನಿಗೆ ಏನೂ ಸಿಕ್ಕಿಲ್ಲ ಎಂಬ ಚಿಂತೆ ಆ ಪಕ್ಷದ ನಾಯಕರೊಬ್ಬರಲ್ಲಿದೆ. ಅವರಿಗೆ ರಾಜಕೀಯದಲ್ಲಿ ಕಳೆದುಹೋಗುತ್ತೇನೆಂಬ ಆತಂಕವಿದೆ. ಹೀಗಾಗಿ ದಿಢೀರ್ ರಾಷ್ಟ್ರಭಕ್ತಿ ಜಾಗೃತವಾಗಿದೆ. ದೇವರು, ದೇಶದ ಹೆಸರಿನಲ್ಲಿ ಅಮಲನ್ನು ಹಚ್ಚಿ ನಿಮಗೆ ದೇಶ ಪ್ರೇಮಿ ಎಂದು ಕರೆಸಿಕೊಳ್ಳು ಹಕ್ಕು ಏನಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೆ.ಎಸ್.ಈಶ್ವರಪ್ಪ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಯಡಿಯೂರಪ್ಪ ವಿರುದ್ಧ ದೂರು ಕೊಟ್ಟವರಾರು
ಇತಿಹಾಸವನ್ನು ಅವರು ಒಮ್ಮೆ ಅವಲೋಕಿಸಲಿ. ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ಕೊಟ್ಟವರು ಯಾರು? ರಾಜ್ಯಪಾಲರನ್ನು ಭೇಟಿ ಮಾಡಿದವರು ಯಾರು? ನೋಟು ಎಣಿಸುವ ಯಂತ್ರ ಇಟ್ಟುಕೊಂಡವರು ಯಾರು? ಡಿ.ಕೆ.ಶಿವಕುಮಾರ್ಗೆ ಪದೇ ಪದೇ ಜೈಲಿಗೆ ಹೋದವರು ಎಂದು ಹೇಳಲು ಕಾರಣವೇನು ಎಂದು ಟೀಕಿಸಿದರು.
ಬಾಯಿ ತಪ್ಪಿ ಆ ವಾಕ್ಯ ಹೇಳಿರಬಹುದು
ಸಂಸದ ಡಿ.ಕೆ.ಸುರೇಶ್ ದಕ್ಷಿಣ ಭಾರತ ಪ್ರತ್ಯೇಕ ದೇಶವಾಗಬೇಕು ಎಂದು ಹೇಳಿರುವ ನೋವಿನ ಹಿಂದಿನ ಭಾವನೆ ಅರ್ಥ ಮಾಡಿಕೊಳ್ಳಬೇಕು. ಮೇಕೆದಾಟು, ಕಾವೇರಿ, ಮಹದಾಯಿ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನೆರೆ, ಬರ ಪರಿಹಾರದಲ್ಲಿ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಕಡೆಗಣಿಸಿದೆ. ಹೀಗಾಗಿ ಸುರೇಶ್ ಹತಾಶೆಯಿಂದ ಮಾತನಾಡುವ ಭರದಲ್ಲಿ ಬಾಯಿತಪ್ಪಿ ಆ ವಾಕ್ಯ ಹೇಳಿರಬಹುದು ಎಂದು ಆಯನೂರು ಹೇಳಿದರು.
ಜಿಲ್ಲೆಗೂ ಕೇಂದ್ರದಿಂದ ಅನ್ಯಾಯ
ರಾಜ್ಯಕ್ಕೆ ಮಾತ್ರವಲ್ಲ ಜಿಲ್ಲೆಗೂ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ತೀರ್ಥಹಳ್ಳಿಯಲ್ಲಿ ಅಡಿಕೆ ಸಂಶೋಧನಾ ಕೇಂದ್ರ ಮಾಡುವುದಾಗಿ ಹೇಳಿದ್ದ ಅಮಿತ್ ಶಾ ಇದುವರೆಗೂ ಅದನ್ನು ಮಾಡಿಲ್ಲ. ತುಮಕೂರು– ಶಿವಮೊಗ್ಗ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಭದ್ರಾವತಿಯ ವಿಐಎಸ್ಎಲ್ಗೆ ನೆರವು ಕೊಡುವುದಾಗಿ ಹೇಳಿದ್ದರು. ಕೊನೆಗೂ ಕೊಡಲಿಲ್ಲ ಎಂದರು.
ಇದನ್ನೂ ಓದಿ – ಭದ್ರಾವತಿ ಆಹಾರ ಇಲಾಖೆ ಗೋದಾಮಿನ ಗೋಡೆಗೆ ಭಿತ್ತಿ ಪತ್ರ ಅಂಟಿಸಿ, ಪ್ರತಿಭಟನೆ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






