SHIVAMOGGA LIVE NEWS | 25 JANUARY 2024
SHIMOGA : ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆದಿಲ್ಲ. ಅದ್ದರಿಂದ ಶೈಕ್ಷಣಿಕ ಅವಧಿಯನ್ನು ಮುಂದೂಡುವಂತೆ ಆಗ್ರಹಿಸಿ ಎನ್ಎಸ್ಯುಐ ಸಂಘಟನೆ ವತಿಯಿಂದ ಶಿವಮೊಗ್ಗದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಮನವಿ ಸಲ್ಲಿಸಲಾಯಿತು.
ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಕಾಲೇಜುಗಳಲ್ಲಿ ತರಗತಿಗಳು ಸರಿಯಾಗಿ ನಡೆದಿಲ್ಲ. ಪಾಠಗಳನ್ನು ಮುಗಿಸಲು ಇನ್ನಷ್ಟು ಕಾಲವಕಾಶ ಬೇಕಿದೆ. ಆದ್ದರಿಂದ ಅಕಾಡೆಮಿಕ್ ಕ್ಯಾಲೆಂಡರ್ ಅವಧಿಯನ್ನ ಫೆಬ್ರವರಿ ತಿಂಗಳ ಅಂತ್ಯದವರೆಗೆ ವಿಸ್ತರಣೆ ಮಾಡಬೇಕು ಎಂದು ಎನ್ಎಸ್ಯುಐ ಕಾರ್ಯಕರ್ತರು ಆಗ್ರಹಿಸಿದರು.
ಇದನ್ನೂ ಓದಿ – ಕುವೆಂಪು ವಿವಿ ಅಕಾಡೆಮಿಕ್ ಕೌನ್ಸಿಲ್ಗೆ ಅರುಣ್, ಸೂರಜ್ ರೇವಣ್ಣ, ಏನಿದು ಕೌನ್ಸಿಲ್?
ಎನ್ಎಸ್ಯುಐ ಜಿಲ್ಲಾ ಅಧ್ಯಕ್ಷ ವಿಜಯ್, ನಗರಾಧ್ಯಕ್ಷ ಚರಣ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಧನರಾಜ್, ರವಿ, ಚಂದ್ರೋಜಿ, ಸಾಗರ್, ಮನು, ಅಜಿತ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200