ಕುವೆಂಪು ವಿವಿ ಅಕಾಡೆಮಿಕ್‌ ಕ್ಯಾಲೆಂಡರ್‌ ಅವಧಿ ಮುಂದೂಡಲು ವಿದ್ಯಾರ್ಥಿ ಸಂಘಟನೆ ಆಗ್ರಹ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 JANUARY 2024

SHIMOGA : ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆದಿಲ್ಲ. ಅದ್ದರಿಂದ ಶೈಕ್ಷಣಿಕ ಅವಧಿಯನ್ನು ಮುಂದೂಡುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ವತಿಯಿಂದ ಶಿವಮೊಗ್ಗದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರಿಗೆ ಮನವಿ ಸಲ್ಲಿಸಲಾಯಿತು.

ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಕಾಲೇಜುಗಳಲ್ಲಿ ತರಗತಿಗಳು ಸರಿಯಾಗಿ ನಡೆದಿಲ್ಲ. ಪಾಠಗಳನ್ನು ಮುಗಿಸಲು ಇನ್ನಷ್ಟು ಕಾಲವಕಾಶ ಬೇಕಿದೆ. ಆದ್ದರಿಂದ ಅಕಾಡೆಮಿಕ್ ಕ್ಯಾಲೆಂಡರ್‌ ಅವಧಿಯನ್ನ ಫೆಬ್ರವರಿ ತಿಂಗಳ ಅಂತ್ಯದವರೆಗೆ ವಿಸ್ತರಣೆ ಮಾಡಬೇಕು ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಆಗ್ರಹಿಸಿದರು.

ಇದನ್ನೂ ಓದಿ – ಕುವೆಂಪು ವಿವಿ ಅಕಾಡೆಮಿಕ್‌ ಕೌನ್ಸಿಲ್‌ಗೆ ಅರುಣ್‌, ಸೂರಜ್‌ ರೇವಣ್ಣ, ಏನಿದು ಕೌನ್ಸಿಲ್‌?

ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ವಿಜಯ್, ನಗರಾಧ್ಯಕ್ಷ ಚರಣ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಧನರಾಜ್, ರವಿ, ಚಂದ್ರೋಜಿ, ಸಾಗರ್, ಮನು, ಅಜಿತ್ ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2024

Leave a Comment