SHIVAMOGGA LIVE NEWS | 14 MAY 2024
SHIMOGA : ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಡೊನೇಷನ್ ಹಾವಳಿಗೆ (Donation Menace) ತಡೆಯೊಡ್ಡಬೇಕು ಎಂದು ಆಗ್ರಹಿಸಿ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಿಗೆ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತದೆ. ಶುಲ್ಕದಲ್ಲಿ ವಿನಾಯಿತಿ ನೀಡಿದರೆ ಸಾವಿರಾರು ವಿದ್ಯಾರ್ಥಿಗಳಿಗೆ ಹಾಗೂ ಬಡವರಿಗೆ ಅನುಕೂಲವಾಗುತ್ತದೆ. ಸರ್ಕಾರ ನಿಗದಿಪಡಿಸುವ ಶುಲ್ಕ ಪಡೆಯುವಂತೆ ಸೂಚಿಸಬೇಕು. ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಿಂದ ಹಾಗೂ ಪದವಿ ಪೂರ್ವ ಕಾಲೇಜುಗಳಿಂದ ಪಾಲಕರಿಗೆ ಆಗುವ ಕಿರುಕುಳ ತಪ್ಪಿಸಬೇಕು. ರಾಜ್ಯದಲ್ಲಿ ಡೋನೆಷನ್ಗೆ ಕಡಿವಾಣ ಹಾಕಬೇಕು ಎಂದು ಎನ್ಎಸ್ಯುಐ ಕಾರ್ಯಕರ್ತರು ಆಗ್ರಹಿಸಿದರು.
ಪಿಯುಸಿ ಫಲಿತಾಂಶ ಪ್ರಕಟಗೊಂಡು ತಿಂಗಳು ಕಳೆಯುವುದರಲ್ಲಿ ಖಾಸಗಿ ಕಾಲೇಜುಗಳು ಪ್ರವೇಶಾತಿ ಮುಗಿದಿವೆ ಎನ್ನುತ್ತಿದ್ದಾರೆ. ಇದರಿಂದ ಹಲವು ವಿದ್ಯಾರ್ಥಿಗಳು ಪದವಿ ಶಿಕ್ಷಣ ಪ್ರವೇಶಾತಿಯಿಂದ ವಂಚಿತರಾಗಲಿದ್ದಾರೆ. ಆದ್ದರಿಂದ ಖಾಸಗಿ ಪದವಿ ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳು ರೋಸ್ಟರ್ ಪದ್ಧತಿ ಅನುಸರಿಸಿ ಪ್ರವೇಶ ಪ್ರಕ್ರಿಯೆ ಆರಂಭಿಸಲು ಆದೇಶಿಸಬೇಕು. ಇಲ್ಲವಾದರೆ ಎನ್ಎಸ್ಯುಐ ವತಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಯಿತು.
ಜಿಲ್ಲಾಧ್ಯಕ್ಷ ವಿಜಯಕುಮಾರ್, ಕಾರ್ಯಧ್ಯಕ್ಷ ಕಾಟಿಕೆರೆ ರವಿ, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ನಗರ ಅಧ್ಯಕ್ಷ ಚರಣ್, ಚಂದ್ರು ಜಿ ರಾವ್, ರವಿ, ವರುಣ್, ತೌಫಿಕ್, ತೇಜು, ಸುಹಾಸ್, ಅಭಿಷೇಕ್, ಸೃಜನ್ ಫರಾನ್, ಪ್ರಜ್ವಲ್ ಸೇರಿ ಹಲವಾರು ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ದಟ್ಟ ಮೋಡ, ಗುಡುಗು ಸಹಿತ ಮಳೆ, ಜಿಲ್ಲೆಯ ವಿವಿಧೆಡೆ ವರ್ಷಧಾರೆ, ಎಲ್ಲೆಲ್ಲಿ ಮಳೆಯಾಗ್ತಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200