SHIMOGA NEWS, 30 SEPTEMBER 2024 : ಚೀನಾ ಬೆಳ್ಳುಳ್ಳಿ (garlic) ಮಾರಾಟದ ಶಂಕೆ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (ಎಫ್ಎಸ್ಎಸ್ಎಐ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳುಳ್ಳಿ ಸ್ಯಾಂಪಲ್ಗಳನ್ನು ವಶಕ್ಕೆ ಪಡೆದು ಲ್ಯಾಬ್ಗೆ ಕಳುಹಿಸಲಾಗಿದೆ.
ಶಿವಮೊಗ್ಗ ಎಪಿಎಂಸಿ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾ ಕೆಲವು ಮಾರಾಟಗಾರರ ಮೇಲೆ ದಾಳಿ ನಡೆಸಿದ್ದಾರೆ. ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವ ಶಂಕೆ ಮೇರೆಗೆ ಎಫ್ಎಸ್ಎಸ್ಎಐ ಅಧಿಕಾರಿ ಸದಾಶಿವ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುವ ಹಿನ್ನೆಲೆ ಕೇಂದ್ರ ಸರ್ಕಾರ ಚೀನಾ ಬೆಳ್ಳುಳ್ಳಿ ಮಾರಾಟವನ್ನು ಭಾರತದಲ್ಲಿ ನಿಷೇಧಿಸಿದೆ. ಹೀಗಿದ್ದೂ ದೇಶದ ವಿವಿಧೆಡೆ ಚೀನಾ ಬೆಳ್ಳುಳ್ಳಿ ಮಾರಾಟದ ಆರೋಪಗಳಿದ್ದವು. ಶಿವಮೊಗ್ಗದಲ್ಲಿಯು ಇದೇ ಶಂಕೆ ಮೇರೆಗೆ ದಾಳಿ ನಡೆಸಲಾಗಿದೆ. ಸದ್ಯ ಸಂಗ್ರಹಿಸಲಾಗಿರುವ ಸ್ಯಾಂಪಲ್ ಆನ್ನು ಲ್ಯಾಬ್ಗೆ ಕಳುಹಿಸಲಾಗಿದೆ. ವರದಿ ಬಳಿಕ ಸ್ಪಷ್ಟತೆ ಲಭಿಸಲಿದೆ.
ಇದನ್ನೂ ಓದಿ » ಕರ್ನಾಟಕ ಸಂಘ, ನೂತನ ಕಾರ್ಯಕಾರಿ ಸಮಿತಿಗೆ 15 ಮಂದಿ ಆಯ್ಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200