NEWS HIGHLIGHTS
SHIMOGA NEWS, 30 SEPTEMBER 2024 : ಚೀನಾ ಬೆಳ್ಳುಳ್ಳಿ (garlic) ಮಾರಾಟದ ಶಂಕೆ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ (ಎಫ್ಎಸ್ಎಸ್ಎಐ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳುಳ್ಳಿ ಸ್ಯಾಂಪಲ್ಗಳನ್ನು ವಶಕ್ಕೆ ಪಡೆದು ಲ್ಯಾಬ್ಗೆ ಕಳುಹಿಸಲಾಗಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ಶಿವಮೊಗ್ಗ ಎಪಿಎಂಸಿ, ಗಾಂಧಿ ಬಜಾರ್, ಲಷ್ಕರ್ ಮೊಹಲ್ಲಾ ಕೆಲವು ಮಾರಾಟಗಾರರ ಮೇಲೆ ದಾಳಿ ನಡೆಸಿದ್ದಾರೆ. ನಿಷೇಧಿತ ಚೀನಾ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವ ಶಂಕೆ ಮೇರೆಗೆ ಎಫ್ಎಸ್ಎಸ್ಎಐ ಅಧಿಕಾರಿ ಸದಾಶಿವ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುವ ಹಿನ್ನೆಲೆ ಕೇಂದ್ರ ಸರ್ಕಾರ ಚೀನಾ ಬೆಳ್ಳುಳ್ಳಿ ಮಾರಾಟವನ್ನು ಭಾರತದಲ್ಲಿ ನಿಷೇಧಿಸಿದೆ. ಹೀಗಿದ್ದೂ ದೇಶದ ವಿವಿಧೆಡೆ ಚೀನಾ ಬೆಳ್ಳುಳ್ಳಿ ಮಾರಾಟದ ಆರೋಪಗಳಿದ್ದವು. ಶಿವಮೊಗ್ಗದಲ್ಲಿಯು ಇದೇ ಶಂಕೆ ಮೇರೆಗೆ ದಾಳಿ ನಡೆಸಲಾಗಿದೆ. ಸದ್ಯ ಸಂಗ್ರಹಿಸಲಾಗಿರುವ ಸ್ಯಾಂಪಲ್ ಆನ್ನು ಲ್ಯಾಬ್ಗೆ ಕಳುಹಿಸಲಾಗಿದೆ. ವರದಿ ಬಳಿಕ ಸ್ಪಷ್ಟತೆ ಲಭಿಸಲಿದೆ.
ಇದನ್ನೂ ಓದಿ » ಕರ್ನಾಟಕ ಸಂಘ, ನೂತನ ಕಾರ್ಯಕಾರಿ ಸಮಿತಿಗೆ 15 ಮಂದಿ ಆಯ್ಕೆ