ಶಿವಮೊಗ್ಗ: ಜಿಲ್ಲೆಯ ದೀವರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕಾರಿ ಸಮಿತಿ (office bearers) ಪುನರ್ ರಚನೆ ಆಗಿದೆ. 2026-27 ಮತ್ತು 2027-28ನೇ ಸಾಲಿಗೆ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಸಮಿತಿಯ ಅಧ್ಯಕ್ಷರಾಗಿ ಟಿ.ಕುಪ್ಪಯ್ಯ, ಉಪಾಧ್ಯಕ್ಷರಾಗಿ ಎಂ.ಕೆ. ರಮೇಶ್, ಜಿ.ಎಂ. ವೀರಭದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಕೆ.ಎಸ್. ಮಂಜಪ್ಪ ಆಯ್ಕೆ ಆಗಿದ್ದು, ಕಾರ್ಯದರ್ಶಿಗಳಾಗಿ ಕೆ.ಎಸ್. ಉದಯ ಕುಮಾರ್, ಡಿ. ಮಹಾಬಲೇಶ್ವರ ಆಯ್ಕೆ ಆಗಿದ್ದಾರೆ. ಖಜಾಂಚಿಯಾಗಿ ಯು.ಸಿ. ಹುಚ್ಚರಾಯಪ್ಪ, ಸಹಕಾರ್ಯದರ್ಶಿಗಳಾಗಿ ಯು. ಸುಬ್ರಹ್ಮಣ್ಯ ಹಾಗೂ ಪ್ರಭಾಕರ್ ಬಿ. ಮಲೆಶಂಕರ ಆಯ್ಕೆಯಾಗಿದ್ದಾರೆ.
ಸಂಘಟನಾ ಕಾರ್ಯದರ್ಶಿಗಳಾಗಿ ಎಸ್.ಎಸ್. ಚಂದ್ರಶೇಖರ, ಬಿ. ಭಾರತಿ, ಹೆಚ್.ಡಿ. ಸುಜಿತ್, ಮಂಜಪ್ಪ ಕೆ.ಮಾಲ್ವೆ, ಸುಧಾಕರ ಕೆ. ನಾಯ್ಕ, ಬಿ.ಆರ್. ಗಿರಿಯಪ್ಪ, ಚಂದ್ರಶೇಖರ ಕೆ.ಎಂ, ಎಲ್. ಭರ್ಮಪ್ಪ, ಪುಟ್ಟಸ್ವಾಮಿ ಪಿ. ಚಂಗೊಳ್ಳಿ, ಲೋಹಿತ್ ಅವರು ಆಯ್ಕೆ ಆಗಿದ್ದಾರೆ.
ನಿರ್ದೇಶಕರಾಗಿ ಎಚ್. ನಾಗರಾಜ್, ಶ್ರೀನಿವಾಸ ಜಿ. ನಾಯ್ಕ, ಎಂ.ಪಿ. ಲೋಕೇಶ್ವರ, ಬಿ. ಬಸವಣ್ಯಪ್ಪ ಸೌಭಾಗ್ಯ ಪುರದಾಳು, ಲಕ್ಷ್ಮಣ್ ಚಂಗೊಳ್ಳಿ, ಬಿ. ದಾನಪ್ಪ, ಶಾಂತಕುಮಾರ ಡಿ. ನಾಯ್ಕ, ಆರ್. ಪಾಂಡುರಂಗಪ್ಪ, ಮಹೇಶ್ ಅವರು ಆಯ್ಕೆ ಆಗಿದ್ದಾರೆ ಎಂದು ತಿಳಿಸಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ