SHIVAMOGGA LIVE NEWS | 2 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ELECTION NEWS : ಮತದಾನ ಜಾಗೃತಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಾಂಪ್ರದಾಯಿಕ ಉಡುಪು ಧರಿಸಿ ನಗರದಲ್ಲಿ ಮೆರವಣಿಗೆ ನಡೆಸಿದರು. ಫ್ರೀಡಂ ಪಾರ್ಕ್ನಿಂದ ಆರಂಭವಾದ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಾಗಿತು.
ಭಾರತೀಯ ಸಂಸ್ಕೃತಿ ಬಿಂಬಿಸುವ ಉಡುಪು
ವಿವಿಧ ಇಲಾಖೆಯ ಸಿಬ್ಬಂದಿ ಭಾರತೀಯ ಸಂಸ್ಕೃತಿ ಬಿಂಬಿಸುವ ಉಡುಪು ಧರಿಸಿದ್ದರು. ಮಹಿಳೆಯರು ಸೀರೆ, ಪುರುಷರು ಪಂಚೆ ಶಲ್ಯ ಧರಿಸಿದ್ದರು. ಬಂಜಾರ ಸಮುದಾಯದ ಸಾಂಸ್ಕೃತಿಕ ಉಡುಗೆ, ಅಡಿಕೆ ಟೋಪಿ, ಗಾಂಧಿ ಟೋಪಿ, ಖಾದಿ ವಸ್ತ್ರ, ಯಕ್ಷಗಾನ ವೇಷಭೂಷಣ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆಯ ಹಾದಿ ಉದ್ದಕ್ಕೂ ಕಡ್ಡಾಯ ಮತದಾನದ ಘೋಷಣೆ ಕೂಗಿದರು.
ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಸಾಂಪ್ರದಾಯಿಕ ಉಡುಗೆ ತೊಟ್ಟು ಮತದಾರರಲ್ಲಿ ಜಾಗೃತಿ ಮೂಡಿಸುತ್ತಿರುವುದು ಸಂತೋಷದ ವಿಚಾರ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡಿಸುವ ಗುರಿ ಹೊಂದಿದ್ದೇವೆ. ಈ ಮೂಲಕ ದೇಶದ ಏಳಿಗೆಗೆ ಸಹಕಾರ ನೀಡಬೇಕು.ಸ್ನೇಹಲ್ ಸುಧಾಕರ್ ಲೋಖಂಡೆ, ಜಿ.ಪಂ ಸಿಇಒ

ಫ್ರೀಡಂ ಪಾರ್ಕ್ನಿಂದ ಜೈಲ್ ಸರ್ಕಲ್, ಗೋಪಿ ವೃತ್ತ, ಮಹಾವೀರ ವೃತ್ತ, ಜಿಲ್ಲಾಧಿಕಾರಿಗಳ ಕಛೇರಿ, ನೆಹರು ಮೈದಾನದ ಮೂಲಕ ಜಿಲ್ಲಾ ಪಂಚಾಯತ್ ಆವರಣದವರೆಗೆ ಜಾಗೃತಿ ಜಾಥಾ ನಡೆಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಪ್ರತಿಜ್ಞಾವಿಧಿ ಬೋಧಿಸಿದರು. ರಾಜ್ಯ ಮಟ್ಟದ ಸ್ವೀಪ್ ತರಬೇತುದಾರ ನವೀದ್ ಅಹಮದ್ ಪರ್ವಿಜ್ , ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ.ಚೇತನ್ ಹೆಚ್.ಪಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರಂಗನಾಥ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಭಾಗಹಿಸಿದರು.



ಇದನ್ನೂ ಓದಿ – ಶಿವಮೊಗ್ಗದಲ್ಲಿ ಚುನಾವಣೆ ದಿನ ಶುಭಂ ಹೊಟೇಲ್ನಲ್ಲಿ ತಿಂಡಿ ಫ್ರೀ, ಕಂಡೀಷನ್ ಒಂದೇ
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






