ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಕೆಲ ಖಾಸಗಿ ವ್ಯಕ್ತಿಗಳು ಮತ್ತು ಕೆಲ ಸಂಘ-ಸಂಸ್ಥೆಗಳು ಆಮಿಷಗಳನ್ನೊಡ್ಡುತ್ತಿವೆ. ನಮ್ಮ ಸಂಘಕ್ಕೆ ನೋಂದಣಿಯಾದರೆ ನಿಮ್ಮ ಎಲ್ಲ ಕುಂದುಕೊರತೆಗಳನ್ನು ಬಗೆಹರಿಸುವುದಾಗಿ ಪೊಳ್ಳು ಭರವಸೆ ನೀಡುತ್ತಿವೆ. ಇಂತಹ ವ್ಯಕ್ತಿಗಳು ಹಾಗೂ ಸಂಘಟನೆಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠ ಎಚ್ಚರಿಸಿದ್ದಾರೆ (Warns).
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್ ಬೆಳಗಿ ಶ್ರದ್ಧಾಂಜಲಿ
ಜಮೀನು ಮಂಜೂರು ಮಾಡಿಸುತ್ತೇವೆ ಎಂದು ನಂಬಿಸಿ ಚೀಟಿ ಮತ್ತು ಫೈನಾನ್ಸ್ ಗಳಲ್ಲಿ ಹಣ ಹೂಡುವಂತೆ ಒತ್ತಡ ಹೇರುವ ಪ್ರವೃತ್ತಿ ಹೆಚ್ಚುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯೂಟ್ಯೂಬ್, ಫೇಸ್ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ನಿವೃತ್ತ ಸೈನಿಕರು ಹಾಗೂ ಅವರ ಕುಟುಂಬದವರನ್ನು ವಂಚಿಸುವ ಪ್ರಯತ್ನ ನಡೆಸಲಾಗುತ್ತಿದೆ. ಏನಾದರೂ ಅನುಮಾನಗಳಿದ್ದಲ್ಲಿ ಕಚೇರಿ ಸಂಪರ್ಕಿಸಬಹುದು ಎಂದು ಹಿರೇಮಠ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200