ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ನ. 22ರ ಬೆಳಗ್ಗೆ 10ರಿಂದ ಕಾಲೇಜಿನ (College) ಸಭಾಂಗಣದಲ್ಲಿ ‘ನಮ್ಮ ಸಹ್ಯಾದ್ರಿ, ನಮ್ಮ -2025’ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜೇಶ್ವರಿ ತಿಳಿಸಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಲೇಜಿನಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಉನ್ನತ ಹುದ್ದೆ, ಸ್ವಂತ ಉದ್ಯಮ ಹೀಗೆ ಹಲವು ಕ್ಷೇತ್ರಗಳಲ್ಲಿ ತೊಡಗಿದ್ದಾರೆ. ಈ ಎಲ್ಲರ ಅಭಿಪ್ರಾಯದಂತೆ ಹಿರಿಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ ಬಂದಿದೆ ಎಂದರು.
ಕಾರ್ಯಕ್ರಮವನ್ನು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸಲಿದ್ದಾರೆ. ಇಡೀ ದಿನ ಹಿರಿಯ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಲಾಗುವುದು. ಸಹ್ಯಾದ್ರಿ ಕಾಲೇಜು 86ನೇ ವರ್ಷಾಚರಣೆಯಲ್ಲಿದೆ. ಕಾಲೇಜಿನಲ್ಲಿ ಓದಿದ ಹಲವರು ಉನ್ನತ ಸಾಧನೆ ಮಾಡಿದ್ದಾರೆ. ಕೆಲವರು ಭಾರತರತ್ನ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಈ ಮೂಲಕ ಕಾಲೇಜಿನ ಹೆಸರು ಪ್ರಖ್ಯಾತಿ ಪಡೆದಿದೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವ ಹಿರಿಯ ವಿದ್ಯಾರ್ಥಿಗಳು ಪರಮೇಶ್ -9986506166, ಸುರೇಶ್ -9731398336 ಸಂಪರ್ಕಿಸಬಹುದು.
ಸುದ್ದಿಗೋಷ್ಠಿಯಲ್ಲಿ ಡಾ.ನಾಗರಾಜ್ ಪರಿಸರ, ಉಮೇಶ್ ಶಾಸ್ತ್ರಿ, ನಾಗರಾಜ್ ನೇರಿಗೆ, ಶಶಿಕುಮಾರ್ ಮತ್ತಿತರರಿದ್ದರು.
ಇದನ್ನೂ ಓದಿ » ಸಾಗರದಲ್ಲಿ ಇವತ್ತು ಸಾಹಿತ್ಯ ಹುಣ್ಣಿಮೆ, ಎಲ್ಲಿ? ಯಾರೆಲ್ಲ ಪಾಲ್ಗೊಳ್ಳಲಿದ್ದಾರೆ?
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು














