SHIVAMOGGA LIVE | 26 JUNE 2023
SHIMOGA : ‘ಒಂದು ಕಾನೂನಾತ್ಮ ಕೊಲೆ’ ನಾಟಕಕ್ಕೆ (Drama) ಶಿವಮೊಗ್ಗದಲ್ಲಿ ಭರ್ಜರಿ ರೆಸ್ಪಾನ್ಸ್ ಲಭಿಸಿದೆ. ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಭಾನುವಾರ ಸಂಜೆ ಶಿವಮೊಗ್ಗದ ಹೊಂಗಿರಣ ತಂಡದ ವತಿಯಿಂದ ನಾಟಕ ಆಯೋಜಿಸಲಾಗಿತ್ತು.
ಶಿವಕುಮಾರ ಮಾವಲಿ ಅವರ ರಚನೆಯ ನಾಟಕಕ್ಕೆ (Drama) ಕಾಮಿಡಿ ಕಿಲಾಡಿ (Comedy Kiladi) ಖ್ಯಾತಿಯ ಹೊಂಗಿರಣ ಚಂದ್ರು ವಿನ್ಯಾಸ, ರಂಗ ಸಂಯೋಜನೆ ಮತ್ತು ನಿರ್ದೇಶನ ಮಾಡಿದ್ದಾರೆ. ಶಿವಮೊಗ್ಗದ ಹಲವು ಹಿರಿಯ ಮತ್ತು ಕಿರಿಯ ಕಲಾವಿದರು ನಾಟಕದಲ್ಲಿ ಅಭಿನಯಿಸಿದ್ದಾರೆ.
ಇದನ್ನೂ ಓದಿ – IMPACT | ಶಿವಮೊಗ್ಗ ಲೈವ್.ಕಾಂ ವರದಿ ಬಳಿಕ ಜೈಲ್ ಸರ್ಕಲ್ಗೆ ಹೊಸ ಲುಕ್, ಏನೇನಾಗಿದೆ ಈಗ?
ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರ ರಚಿಸುವ ಕೆಲವು ಜನವಿರೋಧಿ ಕಾನೂನು ಮತ್ತು ಅದರ ಪರಿಣಾಮವನ್ನು ಜನರು ಅನುಭವಿಸುವ ಪರಿಯನ್ನು ವಿಡಂಬನಾತ್ಮಕವಾಗಿ ವಿಮರ್ಶಿಸಲಾಗಿದೆ. ನಾಟಕ ವೀಕ್ಷಿಸಲು ನಗರದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ರಂಗಾಸಕ್ತರು ಆಗಮಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200