SHIVAMOGGA LIVE NEWS | DRUGS | 29 ಮೇ 2022
ಗಾಂಜಾ ಸೇವನೆ ಮಾಡುವವರ ಹೆಡೆಮುರಿ ಕಟ್ಟುವ ಕಾರ್ಯವನ್ನು ಶಿವಮೊಗ್ಗ ಪೊಲೀಸರು ಮುಂದುವರೆಸಿದ್ದಾರೆ. ನಗರದ ಬುದ್ದಾನಗರ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಯುವಕನ್ನು ವಿಚಾರಣೆ ಮಾಡಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಆತನನ್ನು ಬಂಧಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮಿಳಘಟ್ಟದ ಇರ್ಫಾನ್ ಪಠಾಣ್ (25) ಬಂಧಿತ. ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಬುದ್ದಾನಗರ ಸರ್ಕಲ್ ಬಳಿ ಇರ್ಫಾನ್ ಪಠಾಣ್ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ವಿಚಾರಣೆ ನಡೆಸಿ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು.
ಗಾಂಜಾ ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಇರ್ಫಾನ್ ಪಠಾಣ್ ವಿರುದ್ಧ ಪ್ರಕರಣ ದಾಖಲು ಮಾಡಿ, ಬಂಧಿಸಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ – ರಾತ್ರೋರಾತ್ರಿ ದೇವಸ್ಥಾನದ ಬಾಗಿಲ ಬೀಗ ಮುರಿದು ಹುಂಡಿ ಕಳ್ಳತನ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.