ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 6 JANUARY 2025
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ (Sweets) ಕಳುಹಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಭದ್ರಾವತಿಯ ಸೌಹಾರ್ದ ಪಟೇಲ್ ಬಂಧಿತ. ಕೊರಿಯರ್ ಮೂಲಕ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭ ಕೋರುವ ಸಂದೇಶದೊಂದಿಗೆ ಸಿಹಿ ತಿಂಡಿ ಕಳುಹಿಸಿದ್ದ.

ಸೌಹಾರ್ದ ಪಟೇಲ್ನನ್ನು ವಶಕ್ಕೆ ಪಡೆದ ಕೋಟೆ ಠಾಣೆ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಈತ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ಗಳನ್ನು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್ ಮತ್ತು ಇಬ್ಬರು ವೈದ್ಯರ ವಿಳಾಸಕ್ಕೆ ಕಳುಹಿಸಿದ್ದ ಎನ್ನಲಾಗಿದೆ. ಈ ಸಿಹಿ ತಿನಿಸು ಕಹಿಯಾಗಿದ್ದವು.ನ್ಯಾಯಾಂಗ ಬಂಧನಕ್ಕೆ ಆರೋಪಿ

ತಮ್ಮ ಹೆಸರಿನಲ್ಲಿ ಕಹಿಯಾಗಿದ್ದ ಸಿಹಿ ತಿಂಡಿ ರವಾನೆಯಾಗಿರುವ ವಿಚಾರವನ್ನು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಗಂಭೀರವಾಗಿ ಪರಿಗಣಿಸಿದ್ದರು. ತಾವು ಯಾರಿಗು ಸಿಹಿ ತಿಂಡಿ ಕಳುಹಿಸಿಲ್ಲ ಎಂದ ಸ್ಪಷ್ಟಪಡಿಸಿದ್ದರು. ಘಟನೆ ಸಂಬಂಧ ಡಾ.ಧನಂಜಯ ಸರ್ಜಿ ತಮ್ಮ ಆಪ್ತ ಕಾರ್ಯದರ್ಶಿಯ ಮೂಲಕ ದೂರು ಕೊಡಿಸಿದ್ದರು. ಇನ್ನು, ಬಿಜೆಪಿ ನಿಯೋಗದೊಂದಿಗೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿದ್ದರು. ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.ಗಂಭೀರವಾಗಿ ಪರಿಗಣಿಸಿದ್ದ ಡಾ.ಸರ್ಜಿ

ಇದನ್ನೂ ಓದಿ » ನಾ.ಡಿಸೋಜ ಅಂತ್ಯಕ್ರಿಯೆ ಕುರಿತು ಪುತ್ರನ ಹೇಳಿಕೆ, ಇಲ್ಲಿದೆ ವಿಡಿಯೋ
LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು















