ಹಿಂದಿನ ಡಿಸಿ ವಿರುದ್ಧ ಮಾನನಷ್ಟ ಕೇಸ್, ಒಂದು ರುಪಾಯಿ ಪರಿಹಾರ ಕೊಡುವಂತೆ ಕೋರ್ಟ್ ಸೂಚನೆ, ಕಾರಣವೇನು ಗೊತ್ತಾ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA | 12 ಜನವರಿ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಒಂದು ರೂಪಾಯಿ ನೀಡಬೇಕು ಎಂದು ಹಿಂದಿನ ಜಿಲ್ಲಾಧಿಕಾರಿ, ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್‌ಗೆ ಇಲ್ಲಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ.

ಪೊನ್ನುರಾಜ್ 2011ರಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಆಗಿದ್ದ ವೇಳೆ ಕಂದಾಯ ಇಲಾಖೆ ನಿವೃತ್ತ ನೌಕರ ವಿನೋಬನಗರದ ಕೆ.ಶಿವಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿ, ಒಂದು ರೂ. ಪರಿಹಾರ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಸತೀಶ್, 60 ದಿನಗಳಲ್ಲಿ ಕೆ.ಶಿವಪ್ಪ ಅವರಿಗೆ 1 ರೂ. ಪರಿಹಾರ ನೀಡುವಂತೆ ಜ.10ರಂದು ಆದೇಶಿಸಿದ್ದಾರೆ.

ಏನಿದು ಕೇಸ್? ಮಾನನಷ್ಟಕ್ಕೇನು ಕಾರಣ?

ಶಿವಪ್ಪ ನಿವೃತ್ತರಾಗಿದ್ದರೂ ಕಂದಾಯ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಸಾರ್ವಜನಿಕರ ವ್ಯವಹಾರಗಳಿಗೆ ತೊಂದರೆ ಮಾಡುತ್ತಿದ್ದಾರೆಂದು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಎ.ಎಂ.ಮಹದೇವಪ್ಪ ಅಂದಿನ ಡಿಸಿ ಪೊನ್ನುರಾಜ್‌ಗೆ ದೂರು ನೀಡಿದ್ದರು. ವಿಚಾರಣೆ ನಡೆಸದೆ, ವಿವರಣೆ ಕೇಳಿ ನೋಟಿಸ್ ಕೂಡ ನೀಡದೆ ಶಿವಪ್ಪಗೆ ಯಾವುದೇ ಇಲಾಖೆ ಕಚೇರಿಗೆ ಹೋಗಬಾರದು ಎಂದು ಡಿಸಿ ಸುತ್ತೋಲೆ ಹೊರಡಿಸಿದ್ದರು.

ಪೊನ್ನುರಾಜ್ ಹೊರಡಿಸಿದ್ದ ಸುತ್ತೋಲೆ ತನ್ನ ವ್ಯವಹಾರಿಕ ಬದುಕಿನ ಮೇಲೆ ದುಷ್ಪರಿಣಾಮ ಬೀರಿದ್ದು, 25 ಲಕ್ಷ ರೂ.ಗೂ ಹೆಚ್ಚಿನ ನಷ್ಟ ಸಂಭವಿಸಿದೆ ಎಂದು ಶಿವಪ್ಪ, 1 ರೂ.ಗೆ ಸೀಮಿತಗೊಳಿಸಿ 2014ರಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Shimoga JMFC court has ordered to pay One Rupee as relief fund over a Defamation Case. The Case was against Former Deputy Commissioner Ponnuraj.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment