ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MARCH 2021
ರೈಲ್ವೆ ನಿಲ್ದಾಣದ ಬಳಿ, ಹೊನ್ನಾಳಿ ರಸ್ತೆಯಲ್ಲಿರುವ ಸೇತುವೆ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೊನ್ನಾಳಿ ಕಡೆಯಿಂದ ಬರುವ ಬಸ್ಸು, ಲಾರಿ, ಕಾರು ಸೇರಿದಂತೆ ಎಲ್ಲ ಬಗೆಯ ವಾಹನಗಳು ಸೇತುವೆ ಮೇಲೆ ಬಿಡಲಾಗುತ್ತಿದೆ. ಆದರೆ ಶಿವಮೊಗ್ಗದ ಕಡೆಯಿಂದ ತೆರಳುವ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಸೇತುವೆ ಮುಂಭಾಗ ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನಗಳನ್ನು ತಡೆದು, ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸುತ್ತಿದ್ದಾರೆ.
ಸೇತುವೆ ಮೇಲೆ ಸಮಸ್ಯೆ ಏನು?
ಸೇತುವೆ ಮೇಲೆ ಜಾಯಿಂಟ್ಗಳಿರುವ ಕಡೆಯಲ್ಲಿ ಕಬ್ಬಿಣ್ಣದ ರಾಡ್ಗಳು ಮೇಲೆದಿವೆ. ಇದರಿಂದ ವಾಹನ ಸವಾರರು ತೀವ್ರ ಸಮಸ್ಯೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಜಾಯಿಂಟ್ಗಳಿರುವ ಕಡೆಯಲ್ಲಿ ಕಾಂಕ್ರಿಟ್ ಹಾಕಿ, ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ಇನ್ನೂ 25 ದಿನ ನಡೆಯುತ್ತೆ ಕೆಲಸ
ಸೇತುವೆ ಮೇಲೆ ಇವತ್ತಿನಿಂದ ಕಾಮಗಾರಿ ಆರಂಭವಾಗಿದೆ. ಸುಮಾರು 25 ದಿನ ಕಾಮಗಾರಿ ನಡೆಯಲಿದೆ ಎಂದು ಲೋಕೋಪಯೋಗಿ ಇಲಾಖೆ ಇಇ ಸಂಪತ್ ಕುಮಾರ್ ತಿಳಿಸಿದ್ದಾರೆ. ಕಾಂಕ್ರಿಟ್ ಹಾಕಿ ಜಾಯಿಂಟ್ಗಳನ್ನು ಬಂದ್ ಮಾಡಲಾಗುತ್ತದೆ. ಹಾಗಾಗಿ ಇಷ್ಟು ಸಮಯ ಹಿಡಿಯುವ ಸಾಧ್ಯತೆ ಇದೆ.
ಆ ಕಡೆಯಿಂದ ಬರುಬಹುದು
ಹೊನ್ನಾಳಿ, ರಾಗಿಗುಡ್ಡ ಕಡೆಯಿಂದ ಬರುವ ವಾಹನಗಳು ಸೇತುವೆ ಮೇಲಿಂದ ಶಿವಮೊಗ್ಗ ನಗರದ ಕಡೆಗೆ ಬರಬಹುದು. ಆದರೆ ಶಿವಮೊಗ್ಗ ಸಿಟಿಯ ಕಡೆಯಿಂದ ರಾಗಿಗುಡ್ಡ, ಹೊನ್ನಾಳಿ ಕಡೆಗೆ ತೆರಳುವ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ದ್ವಿಚಕ್ರ ವಾಹನಗಳನ್ನು ಮಾತ್ರ ಸೇತುವೆ ಮೇಲೆ ಬಿಡಲಾಗುತ್ತಿದೆ. ಇನ್ನು, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಸವಳಂಗ ರಸ್ತೆಯಲ್ಲಿ ಜೆಎನ್ಎನ್ಸಿ ಕಾಲೇಜು ಬಳಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿದೆ.



ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















