ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಅಕ್ಟೋಬರ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಫುಟ್ ಪಾತ್ ಮೇಲೆ ಪಾದಚಾರಿಗಳಿಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆ ಪೊಲೀಸರು, ಮಹಾನಗರ ಪಾಲಿಕೆ ಅಧಿಕಾರಿಗಳು ಇವತ್ತು ಕಾರ್ಯಾಚರಣೆ ನಡೆಸಿದರು. ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿದರು.
ನಗರದ ಬಿ.ಹೆಚ್.ರಸ್ತೆ, ನೆಹರೂ ರೋಡ್ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಲಾಯಿತು.
ವ್ಯಾಪಾರಿಗಳ ತೆರವು ಕಾರ್ಯ
ಫುಟ್ ಪಾತ್ ಮೇಲೆ ವ್ಯಾಪಾರ ಮಾಡುವುದು, ಅಂಗಡಿಗಳು, ಹೊಟೇಲ್’ಗಳ ಬೋರ್ಡ್’ಗಳನ್ನ ಇಡಲಾಗಿತ್ತು. ಇದರಿಂದ ಪಾದಚಾರಿಗಳು ಫುಟ್ ಪಾತ್ ಬಿಟ್ಟು, ರಸ್ತೆ ಮೇಲೆ ಓಡಾಡುತ್ತಿದ್ದರು. ಇದರಿಂದ ಅಪಘಾತಗಳು ಸಂಭವಿಸುವ ಆತಂಕವಿತ್ತು.
ಇನ್ನು, ಬೀದಿ ಬದಿ ವ್ಯಾಪಾರಿಗಳು ಫುಟ್ ಪಾತ್ ಮೇಲೆ ವ್ಯಾಪಾರ ಮಾಡದಂತೆ ಮುನ್ನೆಚ್ಚರಿಕೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇವತ್ತು ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಬೀದ ಬದಿ ವ್ಯಾಪಾರಿಗಳನ್ನು ತೆರವು ಮಾಡಲಾಯಿತು.

ಕೆಲವು ವಸ್ತುಗಳು ವಶಕ್ಕೆ
ಇನ್ನು, ಪೊಲೀಸರು ಮತ್ತು ಅಧಿಕಾರಿಗಳು ತೆರವು ಕಾರ್ಯಾಚರಣೆಗೆ ಕೆಲವರು ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಹಾಗಾಗಿ ಕೆಲವು ವಸ್ತುಗಳು, ಅಂಗಡಿ, ಹೊಟೇಲ್’ಗಳ ಬೋರ್ಡ್’ಗಳನ್ನು ಪೊಲೀಸರು ವಶಕ್ಕೆ ಪಡೆದು, ಟೈಗರ್ ವಾಹನದಲ್ಲಿ ಠಾಣೆಗೆ ಕೊಂಡೊಯ್ಯಲಾಯ್ತು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






