ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020
ಯುವತಿ ಜೊತೆಗೆ ತುಂಗಾ ನದಿಗೆ ಜಿಗಿದ ಯುವಕನ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಹೇಗೆ ನಡೀತಿದೆ ಶೋಧ ಕಾರ್ಯ?
ಬೈಪಾಸ್ ರಸ್ತೆಯಲ್ಲಿ ಸೇತುವೆ ಬಳಿ ಅನುಷಾ (20) ಮತ್ತು ಸಂತೋಷ್ (20) ಶುಕ್ರವಾರ ಮಧ್ಯಾಹ್ನ ತುಂಗಾ ಹೊಳೆಗೆ ಹಾರಿದ್ದರು. ಈವರೆಗೂ ಸಂತೋಷ್ ಪತ್ತೆಯಾಗಿಲ್ಲ. ಆತನ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅಗ್ನಿಶಾಮಕ ದಳ ಎರಡು ಬೋಟ್ಗಳಲ್ಲಿ ಶೋಧ ಕಾರ್ಯ ನಡೆಸುತ್ತಿದೆ.
ಎರಡು ಟೀಮ್ನಿಂದ ಶೋಧ ಕಾರ್ಯ
ಅಗ್ನಿಶಾಮಕ ಸಿಬ್ಬಂದಿ ಎರಡು ಬೋಟ್ಗಳಲ್ಲಿ ಎರಡು ತಂಡವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಬೈಪಾಸ್ ಸೇತುವೆಯಿಂದ ಹಳೆ ಸೇತುವೆವರೆಗೆ ಒಂದು ತಂಡ ಶೋಧ ಕಾರ್ಯಾಚರಣೆ ಮಾಡುತ್ತಿದೆ. ಮತ್ತೊಂದು ತಂಡ ಹಳೆ ಸೇತುವೆಯಿಂದ ಮುಂದಕ್ಕೆ ಕಾರ್ಯಾಚರಣೆ ನಡೆಸುತ್ತಿದೆ.
ಹೊಳೆ ಮಧ್ಯೆ, ದಡದಲ್ಲೂ ಶೋಧ
ತುಂಗಾ ಹೊಳೆಯ ನಡುವೆ ಬಂಡೆಗಳಿವೆ, ನೀರಿನ ಹರಿವು ಕಡಿಮೆ ಆಗಿರುವುದರಿಂದ ಗಿಡಗಳು ಮೇಲೆ ಕಾಣಿಸುತ್ತಿವೆ. ಇವುಗಳ ನಡುವೆಯು ಸಂತೋಷ್ ಸಿಕ್ಕಿರಬಹುದು ಎಂದು ಶೋಧ ನಡೆಸಲಾಗುತ್ತಿದೆ. ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















