ತುಂಗಾ ನದಿಗೆ ಹಾರಿದ್ದ ಯುವಕನ ಶೋಧ ಕಾರ್ಯ ಮತ್ತಷ್ಟು ಬಿರುಸು, ಹೇಗೆ ನಡೀತಿದೆ ಗೊತ್ತಾ ಕಾರ್ಯಾಚರಣೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಯುವತಿ ಜೊತೆಗೆ ತುಂಗಾ ನದಿಗೆ ಜಿಗಿದ ಯುವಕನ ಶೋಧ ಕಾರ್ಯ ಮುಂದುವರೆದಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಹೇಗೆ ನಡೀತಿದೆ ಶೋಧ ಕಾರ್ಯ?

ಬೈಪಾಸ್ ರಸ್ತೆಯಲ್ಲಿ ಸೇತುವೆ ಬಳಿ ಅನುಷಾ (20) ಮತ್ತು ಸಂತೋಷ್ (20) ಶುಕ್ರವಾರ ಮಧ್ಯಾಹ್ನ ತುಂಗಾ ಹೊಳೆಗೆ ಹಾರಿದ್ದರು. ಈವರೆಗೂ ಸಂತೋಷ್ ಪತ್ತೆಯಾಗಿಲ್ಲ. ಆತನ ಶೋಧ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಅಗ್ನಿಶಾಮಕ ದಳ ಎರಡು ಬೋಟ್‍ಗಳಲ್ಲಿ ಶೋಧ ಕಾರ್ಯ ನಡೆಸುತ್ತಿದೆ.

ಎರಡು ಟೀಮ್‍ನಿಂದ ಶೋಧ ಕಾರ್ಯ

ಅಗ್ನಿಶಾಮಕ ಸಿಬ್ಬಂದಿ ಎರಡು ಬೋಟ್‍ಗಳಲ್ಲಿ ಎರಡು ತಂಡವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಬೈಪಾಸ್ ಸೇತುವೆಯಿಂದ ಹಳೆ ಸೇತುವೆವರೆಗೆ ಒಂದು ತಂಡ ಶೋಧ ಕಾರ್ಯಾಚರಣೆ ಮಾಡುತ್ತಿದೆ. ಮತ್ತೊಂದು ತಂಡ ಹಳೆ ಸೇತುವೆಯಿಂದ ಮುಂದಕ್ಕೆ ಕಾರ್ಯಾಚರಣೆ ನಡೆಸುತ್ತಿದೆ.

ಹೊಳೆ ಮಧ್ಯೆ, ದಡದಲ್ಲೂ ಶೋಧ

ತುಂಗಾ ಹೊಳೆಯ ನಡುವೆ ಬಂಡೆಗಳಿವೆ, ನೀರಿನ ಹರಿವು ಕಡಿಮೆ ಆಗಿರುವುದರಿಂದ ಗಿಡಗಳು ಮೇಲೆ ಕಾಣಿಸುತ್ತಿವೆ. ಇವುಗಳ ನಡುವೆಯು ಸಂತೋಷ್ ಸಿಕ್ಕಿರಬಹುದು ಎಂದು ಶೋಧ ನಡೆಸಲಾಗುತ್ತಿದೆ. ಅಗ್ನಿಶಾಮಕ ದಳದ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment