ಶಿವಮೊಗ್ಗದ ಮಹಿಳೆಯರೆ ಎಚ್ಚರ, ಹೀಗೂ ಕಳ್ಳತನವಾಗಬಹುದು ಲಕ್ಷಾಂತರ ಮೌಲ್ಯದ ನಿಮ್ಮ ಚಿನ್ನಾಭರಣ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 DECEMBER 2022

ಶಿವಮೊಗ್ಗ : ಪೊಲೀಸ್ ಅಧಿಕಾರಿಗಳಂತೆ ನಟಿಸಿ (fake police), ನಕಲಿ ಐಡಿ ಕಾರ್ಡ್ ತೋರಿಸಿ ಮಹಿಳೆಯೊಬ್ಬರನ್ನು ವಂಚಿಸಿ ನಡು ರಸ್ತೆಯಲ್ಲಿಯೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಲಾಗಿದೆ. ಶಿವಮೊಗ್ಗದ ವಿದ್ಯಾನಗರದಲ್ಲಿ ಘಟನೆ ಸಂಭವಿಸಿದೆ.

Shimoga Nanjappa HOspital

ವಿದ್ಯಾನಗರದ ಜಗದಾಂಬ ಬೀದಿಯ ಮೇರಿ ಜೋಸ್ಫಿನ್ ಎಂಬುವವರಿಂದ ಚಿನ್ನದ ಬಳೆ, ಚೈನ್ ಕದ್ದು ವಂಚಕರು ಪರಾರಿಯಾಗಿದ್ದಾರೆ.

ಸರ್ವೆ ಡ್ಯೂಟಿಗೆ ಬಂದ ಪೊಲಿಸರು..!

ಮೇರಿ ಜೋಸ್ಫಿನ್ ಅವರು ವಿದ್ಯಾನಗರದಲ್ಲಿರುವ ಬ್ಯಾಂಕಿಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರು ಯುವಕರು ಇವರ ಪಕ್ಕಕ್ಕೆ ಬಂದು ಬೈಕ್ ನಿಲ್ಲಿಸಿದ್ದಾರೆ. ತಾವು ಪೊಲೀಸರು (fake police), ಇಲ್ಲಿ ಸರ್ವೆ ಡ್ಯೂಟಿ ಮಾಡುತ್ತಿದ್ದೇವೆ ಎಂದು ಐಡಿ ಕಾರ್ಡ್ ತೋರಿಸಿ ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾರೆ. ಮುಖಕ್ಕೆ ಕಪ್ಪು ಬಟ್ಟೆ ಧರಿಸಿದ್ದ ಯುವಕರು, ‘ಒಡವೆಗಳನ್ನು ಹಾಕಿಕೊಂಡು ಹೀಗೆಲ್ಲ ಓಡಾಡಬಾರದು. ಎಲ್ಲವನ್ನು ಈಗಲೆ ಬಿಚ್ಚಿ ಬ್ಯಾಗಿನಲ್ಲಿ ಹಾಕಿಕೊಳ್ಳಿ’ ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ – ಕಾರಲ್ಲಿ ಬಂದು ಬಾಲಕನ ಕಿಡ್ನಾಪ್, ಅಡಕೆ ವ್ಯಾಪಾರಿ ಸೇರಿ ಭದ್ರಾವತಿ, ಶಿವಮೊಗ್ಗ, ಸಾಗರದ ಐವರು ಅರೆಸ್ಟ್

ಮನೆಗೆ ಹೋಗಿ ಸರ, ಬಳೆ ಬಿಚ್ಚಿಡುತ್ತೇನೆ ಎಂದರು ಮೇರಿ ಜೋಸ್ಫಿನ್ ಅವರು ತಿಳಿಸಿದ್ದಾರೆ. ಅದರೆ ಯುವಕರು ಒತ್ತಾಯವಾಗಿ ಅವುಗಳನ್ನು ಬಿಚ್ಚಿಸಿ ತಮ್ಮ ಕೈಗೆ ಪಡೆದುಕೊಂಡಿದ್ದಾರೆ. ಅಲ್ಲದೆ ಅವುಗಳನ್ನು ಮೇರಿ ಜೋಸ್ಫಿನ್ ಅವರ ಬ್ಯಾಗಿಗೆ ಹಾಕುವವರಂತೆ ನಟಿಸಿ ಬೈಕ್ ಹತ್ತಿ ಪರಾರಿಯಾಗಿದ್ದಾರೆ.

SMG-LIVE-WHATSAPP

ಬ್ಯಾಗ್ ಒಳಗೆ ನೋಡಿದಾಗ ಶಾಕ್

ಪೊಲೀಸ್ ಎಂದು ಹೇಳಿಕೊಂಡು ಬಂದಿದ್ದ ಯುವಕರು ತೆರಳುತ್ತಿದ್ದಂತೆ ಮೇರಿ ಜೋಸ್ಫಿನ್ ಅವರು ಬ್ಯಾಗ್ ಪರಿಶೀಲಿಸಿದ್ದಾರೆ. ಅದರೊಳಗೆ ಚಿನ್ನದ ಚೈನು, ಬಳೆಗಳು ಇರಲಿಲ್ಲ. ಗಾಬಾರಿಗೊಂಡ ಅವರು ಕೂಡಲೆ ತಮ್ಮೆ ಸೊಸೆಗೆ ವಿಚಾರ ತಿಳಿಸಿದ್ದಾರೆ. ಇಬ್ಬರು ಎಲ್ಲೆಡೆ ಹುಡುಕಾಡಿದ್ದಾರೆ. ಆದರೆ ಕಳ್ಳರು ಪತ್ತೆಯಾಗಿಲ್ಲ.

ಇದನ್ನೂ ಓದಿ – ಪೊದೆಯಲ್ಲಿ ಮೃತದೇಹ ಪತ್ತೆ ಕೇಸ್, ಮೃತನ ಅಣ್ಣ ಅರೆಸ್ಟ್, ಹತ್ಯೆಗೆ ಇತ್ತಂತೆ 2 ಕಾರಣ

ಮೇರಿ ಜೋಸ್ಫಿನ್ ಅವರು ಧರಿಸಿದ್ದ 30 ಗ್ರಾಂ ತೂಕದ ಎರಡು ಬಂಗಾರದ ಬಳೆಗಳು, 55 ಗ್ರಾಂ ತೂಕದ ಒಂದ ಎಳೆಯ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಇವುಗಳ ಮೌಲ್ಯ 3.40 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಪೊಲೀಸರೆಂದು ನಂಬಿಸಿ, ನಕಲಿ ಐಡಿ ಕಾರ್ಡ್ ತೋರಿಸಿ ಮಹಿಳೆಯನ್ನು ವಂಚಿಸಿದವರ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದೆ ಮೊದಲಲ್ಲ ಇಂತಹ ಪ್ರಕರಣ

ತಾವು ಪೊಲೀಸರು (fake police) ಎಂದು ಜನರನ್ನು ನಂಬಿಸಿ ದರೋಡೆ, ಕಳ್ಳತನ ಮಾಡಿರುವ ಪ್ರಕರಣ ಇದೆ ಮೊದಲಲ್ಲ. ರಾಜ್ಯದ ವಿವಿಧೆಡೆ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ. ಪೊಲೀಸ್ ಸಿಬ್ಬಂದಿ ನಡು ರಸ್ತೆಯಲ್ಲಿಯೇ ಜನರಿಂದ ಚಿನ್ನಾಭರಣ ತೆಗೆಸುವುದಿಲ್ಲ. ಯಾರೆಂದರೆ ಅವರು ತಮ್ಮನ್ನು ತಾವು ಪೊಲೀಸ್ ಇಲಾಖೆಗೆ ಸಂಬಂಧಿಸಿದವರು ಎಂದು ವಂಚಿಸಲು ಯತ್ನಿಸಿದರೆ ತಕ್ಷಣದ ಹತ್ತಿರದ ಠಾಣೆ ಅಥವಾ 121ಗೆ ಕರೆ ಮಾಡಿ ಪರಿಶೀಲಿಸಿಕೊಳ್ಳಬಹುದಾಗಿದೆ.

Shimoga nanjappa hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2022

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

Leave a Comment