ಶಿವಮೊಗ್ಗ ರೋಟರಿ ಚಿತಾಗಾರ ಸುತ್ತಲು ಸ್ಯಾನಿಟೈಸ್‌ಗೆ ಒತ್ತಾಯ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜುಲೈ 2020

ಕರೋನ ಸೋಂಕಿಗೆ ತುತ್ತಾಗಿ ಮೃತಪಟ್ಟ ವ್ಯಕ್ತಿಯೊಬ್ಬರ ಅಂ‍ತ್ಯ ಸಂಸ್ಕಾರವನ್ನು ರೋಟರಿ ಚಿತಾಗಾರದಲ್ಲಿ ನಡೆಸಲಾಗಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಚಿತಾಗಾರದ ಬಳಿ ಇರುವ ಸ್ಲಂಗೆ ಸಂಪೂರ್ಣ ಸ್ಯಾನಿಟೈಸ್ ಮಾಡಬೇಕು ಎಂದು ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ಕಾರ್ಪೊರೇಟರ್‍ಗಳು, ಚಿತಾಗಾರದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರೊಬ್ಬರ ಅಂತಿಮ ಸಂಸ್ಕಾರ ನಡೆಸಲಾಗಿದೆ. ಈ ವೇಳೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಚಿತಾಗಾರಕ್ಕೆ ಹೋಗುವ ದಾರಿಯಲ್ಲಿ ಬೇಲಿ ಹಾಕಿದ್ದಾರೆ.

ಹಾಗಾಗಿ ಕೂಡಲೆ ಚಿತಾಗಾರದ ಬಳಿ ಇರುವ ಸ್ಲಮ್‍ನಲ್ಲಿ ಸ್ಯಾನಿಟೈಸ್ ಮಾಡಬೇಕು, ಅಲ್ಲಿನ ನಿವಾಸಿಗಳಲ್ಲಿ ಜಿಲ್ಲಾಡಳಿತ ಭರವಸೆ ಮೂಡಿಸಬೇಕು ಎಂದು ಕಾರ್ಪೊರೇಟರ್‍ಗಳು ಒತ್ತಾಯಿಸಿದರು.

ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೇಶ್, ಕಾರ್ಪೊರೇಟರ್‍ಗಳಾದ ಯಮುನಾ ರಂಗೇಗೌಡ, ರಮೇಶ್ ಹೆಗ್ಡೆ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment