ಗಾಂಧಿ ಬಜಾರ್​​ನಲ್ಲಿ ಪಾಲಿಕೆ ಅಧಿಕಾರಿಗಳ ದಿಢೀರ್ ದಾಳಿ, ಇಬ್ಬಗೆ ನೀತಿಗೆ ವ್ಯಾಪಾರಿಗಳು, ಜನರ ಸಿಟ್ಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2021

ಲಾಕ್ ಡೌನ್ ಮುಗಿಯುತ್ತಿದ್ದಂತೆ ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ವ್ಯಾಪಾರ, ವಹಿವಾಟು ನಡುವೆ ಕರೋನವನ್ನೆ ಮರೆತಿದ್ದಾರೆ. ಮಹಾನಗರ ಪಾಲಿಕೆ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ರೂಲ್ಸ್‍ ಬ್ರೇಕ್ ಮಾಡಿದವರಿಗೆ ದಂಡ ಹಾಕಿದ್ದಾರೆ.

ಶಿವಮೊಗ್ಗದ ಗಾಂಧಿ ಬಜಾರ್‍ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೆ ವ್ಯಾಪಾರ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.

ಮಹಾನಗರ ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಅವರೆ ಫೀಲ್ಡಿಗಿಳಿದು ಕೋವಿಡ್ ನಿಯಮ ಉಲ್ಲಂಘಿಸಿದ ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರಿಗೆ ದಂಡ ಹಾಕಿಸಿದ್ದಾರೆ.

ವ್ಯಾಪಾರಿಗಳು, ಜನರ ಆಕ್ರೋಶ

ಮಹಾನಗರ ಪಾಲಿಕೆ ಅಧಿಕಾರಿಗಳ ಕಾರ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಯಿತು. ಅಧಿಕಾರಿಗಳದ್ದು ಏಕ ಪಕ್ಷೀಯ ನಿರ್ಧಾರ ಎಂದು ಸಿಟ್ಟಾದರು.

ರಾಜಕಾರಣಿಗಳ ಕಾರ್ಯಕ್ರಮದ ವೇಳೆ ಕೋವಿಡ್ ನಿಯಮ ಉಲ್ಲಂಘಿಸುವುದನ್ನು ಕಣ್ಣಾರೆ ಕಂಡರೂ ಅಧಿಕಾರಿಗಳು ಕ್ಯಾರೆ ಅನ್ನುವುದಿಲ್ಲ. ದಂಡದ ವಿಚಾರದ ಬಂದಾಗ ಜನರ ಮೇಲಷ್ಟೆ ಬರೆ ಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

210448532 1150935642053011 5310727923528215978 n.jpg? nc cat=108&ccb=1 3& nc sid=730e14& nc ohc=HyUSYM 5kRYAX8NeojV& nc oc=AQnKJVeigcB4YObb29uvToc B797LM1QHA3qPa5i2fBa11Mb4qaAk5j0oUP2xS o0sY7lj51HxHZvCehFF6xIgYx& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment