| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | 7 ಡಿಸೆಂಬರ್ 2018
ನಗರದ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು, ಪಾಲಿಕೆ ಅಧಿಕಾರಿಗಳು ಬೆಳಗ್ಗೆಯಿಂದಲೇ ಆಪರೇಷನ್ ಆರಂಭಿಸಿದ್ದಾರೆ. ಪೊಲೀಸ್ ರಕ್ಷಣೆಯೊಂದಿಗೆ ಜೆಸಿಬಿ ತಂದು, ಸೆಲ್ಲರ್’ಗಳ ತೆರವಿಗೆ ಮುಂದಾಗಿದ್ದಾರೆ.
ಕುವೆಂಪು ರಸ್ತೆಯಿಂದ ಆಪರೇಷನ್ ಶುರುವಾಗಿದೆ. ಹಾಗಾಗಿ ಕಟ್ಟಡ ಮಾಲೀಕರಲ್ಲಿ ನಡುಕ ಶುರುವಾಗಿದೆ. ಶಿವಮೊಗ್ಗ ಸಿಟಿಯಲ್ಲಿ 86 ಕಟ್ಟಡಗಳಿಗೆ ನೊಟೀಸ್ ನೀಡಲಾಗಿದೆ. ಆದರೂ ಸೆಲ್ಲರ್ ತೆರವು ಮಾಡದೆ ಇದ್ದಿದ್ದಕ್ಕೆ, ಪಾಲಿಕೆ ಅಧಿಕಾರಿಗಳೇ ಫೀಲ್ಡಿಗಿಳಿದಿದ್ದಾರೆ.

ಏನಿದು ಸೆಲ್ಲರ್ ತೆರುವು ಕಾರ್ಯಾಚರಣೆ?
ಶಿವಮೊಗ್ಗ ನಗರದಲ್ಲಿ ವಾಣಿಜ್ಯ ಬಳಕೆಗೆ ಕಟ್ಟಡ ನಿರ್ಮಿಸಬೇಕಿದ್ದರೆ, ಕೆಳ ಅಂತಸ್ತನ್ನು ವಾಹನಗಳ ಪಾರ್ಕಿಂಗ್’ಗೆ ಬಿಟ್ಟುಕೊಡಬೇಕು. ಇಲ್ಲವಾದಲ್ಲಿ ಕಟ್ಟ ನಿರ್ಮಾಣಕ್ಕೆ ಪಾಲಿಕೆ ಅನುಮತಿ ಕೊಡುವುದಿಲ್ಲ. ಆದರೆ, ಕಟ್ಟಡ ನಿರ್ಮಾಣದ ಬಳಿಕ, ಸೆಲ್ಲರ್’ಗಳನ್ನು ಪಾರ್ಕಿಂಗ್’ಗೆ ಬಿಟ್ಟುಕೊಡದೇ, ವಾಣಿಜ್ಯ ಕಾರಣಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರಿಂದ ನಗರದ ವಿವಿಧೆಡೆ ಪಾರ್ಕಿಂಗ್ ಸಮಸ್ಯೆ ಸೃಷ್ಟಿಯಾಗಿತ್ತು. ಇದಕ್ಕೆ ಮುಕ್ತಿ ನೀಡುವ ಸಲುವಾಗಿಯೇ, ಪಾಲಿಕೆ ಅಧಿಕಾರಿಗಳು ಫೀಲ್ಡಿಗಿಳಿದಿದ್ದಾರೆ.

‘ಒಂದೇ ಒಂದು ಚಾನ್ಸ್ ಕೊಡಿ.. ಪ್ಲೀಸ್’
ಇನ್ನು, ಪಾಲಿಕೆ ಅಧಿಕಾರಿಗಳು ಜೆಸಿಬಿ ಜೊತೆಗೆ ಕಟ್ಟಡಗಳ ಬಳಿಗೆ ಬರುತ್ತಿದ್ದಂತೆ, ಬೆಳಂಬೆಳಗ್ಗೆ ಕಟ್ಟಡ ಮಾಲೀಕರು ಓಡೋಡಿ ಬಂದಿದ್ದಾರೆ. ಸೆಲ್ಲರ್’ಗಳನ್ನು ತಾವೇ ತೆರವು ಮಾಡುವುದಾಗಿ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಹಾಗಾಗಿ ಪಾಲಿಕೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ. ಆದರೆ ಕಾರ್ಯಾಚರಣೆ ನಿಲ್ಲಿಸುವುದಿಲ್ಲ ಅಂತಲೂ ಸ್ಪಷ್ಪಪಡಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()