SHIMOGA NEWS, 8 OCTOBER 2024 : ಶಿವಮೊಗ್ಗ ದಸರಾ ಹಿನ್ನೆಲೆ ಅ.12ರಂದು ನಗರದಲ್ಲಿ ಜಂಬೂ ಸವಾರಿ ನಡೆಯಲಿದೆ. ಈ ಹಿನ್ನಲೆ ಅಂಬಾರಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕು ಕೇಬಲ್ ವಯರ್ಗಳನ್ನು (Cable Wire) ತೆರವು ಮಾಡುವಂತೆ ಮಹಾನಗರ ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಅಂಬಾರಿ ಮೆರವಣಿಗೆಯು ಕೋಟೆ ರಸ್ತೆಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್, ಶಿವಪ್ಪ ನಾಯಕ ವೃತ್ತ , ಅಮೀರ್ ಅಹ್ಮದ್ ವೃತ್ತ, ಗೋಪಿ ಸರ್ಕಲ್, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್, ಫ್ರೀಡಂ ಪಾರ್ಕ್ ಮಾರ್ಗದಲ್ಲಿ ದಸರಾ ಮೆರವಣಿಗೆ ನಡೆಯಲಿದೆ. ಅಂಬಾರಿ ಸಂಚರಿಸುವ ಈ ರಸ್ತೆಗಳಲ್ಲಿ ನೆಲದಿಂದ ಮೇಲೆ 20 ಅಡಿಯೊಳಗೆ ಹಾದು ಹೋಗಿರುವ ಎಲ್ಲಾ ಕೇಬಲ್, ವಯರ್, ತಂತಿಗಳನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲವಾದಲ್ಲಿ ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗುತ್ತದೆ ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ರಾತ್ರೋರಾತ್ರಿ ಶಿವಮೊಗ್ಗದಲ್ಲಿ ಆರು ಕತ್ತೆಗಳ ಕಳ್ಳತನ