ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಸೌಂದರ್ಯೀಕರಣ ಮತ್ತು ಮೂಲಭೂತ ಸೌಕರ್ಯಗಳಿಗೆ ವೇಗ ನೀಡಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಮುಂದಾಗಿದೆ. ಬುಧವಾರ ನಗರದ ಹಲವೆಡೆ ಪಾರ್ಕ್ ಅಭಿವೃದ್ಧಿ (Gym), ರಸ್ತೆ ಕಾಮಗಾರಿ ಮತ್ತು ಆಟೋ ನಿಲ್ದಾಣಗಳ ನಿರ್ಮಾಣಕ್ಕೆ ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಚಾಲನೆ ನೀಡಿದರು.
ಎಲ್ಲೆಲ್ಲಿ ಏನೇನು ಕಾಮಗಾರಿಗಳು?
- ಉದ್ಯಾನವನ ಮತ್ತು ಜಿಮ್: ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿ 25 ಲಕ್ಷ ರೂ. ವೆಚ್ಚದ ಪಾರ್ಕ್ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಹಾಗೆಯೇ ಎನ್ಇಎಸ್ ಬಡಾವಣೆಯಲ್ಲಿ ನಿರ್ಮಿಸಲಾದ ಸುಸಜ್ಜಿತ ಉದ್ಯಾನವನ ಮತ್ತು ಓಪನ್ ಜಿಮ್ ಅನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಯಿತು.
- ಆಟೋ ನಿಲ್ದಾಣಗಳು: ಆಟೋ ಚಾಲಕರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಸೋಮಿನಕೊಪ್ಪದ ಆದರ್ಶನಗರ, ಹುಚ್ಚರಾಯ ಕಾಲೋನಿ, ಎಲ್.ಬಿ.ಎಸ್ ನಗರ, ಕುವೆಂಪು ನಗರ ಮತ್ತು ಜೆಎನ್ಎನ್ಸಿಇ ಸೇರಿದಂತೆ ಐದು ಪ್ರಮುಖ ಸ್ಥಳಗಳಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಹೊಸ ಆಟೋ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ.
- ಕೆರೆಗಳ ಅಭಿವೃದ್ಧಿ: ಶಿವಮೊಗ್ಗ-ಭದ್ರಾವತಿ ವ್ಯಾಪ್ತಿಯ 22 ಕೆರೆಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಇಲ್ಲಿ ವಾಕಿಂಗ್ ಪಾತ್, ಮಕ್ಕಳ ಆಟಿಕೆಗಳು ಮತ್ತು ಸುಂದರ ಲೈಟಿಂಗ್ ವ್ಯವಸ್ಥೆ ಇರಲಿದೆ.
ಹೊಸ ಅಪಾರ್ಟ್ಮೆಂಟ್, ಮಾಲ್
ನಿವೇಶನಗಳ ಕೊರತೆ ನೀಗಿಸಲು ಜೆ.ಹೆಚ್. ಪಟೇಲ್ ಬಡಾವಣೆಯ 1.5 ಎಕರೆ ಪ್ರದೇಶದಲ್ಲಿ ಸೂಡಾ ವತಿಯಿಂದ ಅಪಾರ್ಟ್ಮೆಂಟ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಜೊತೆಗೆ 100 ಅಡಿ ರಸ್ತೆಯಲ್ಲಿ ಮಾಲ್ ನಿರ್ಮಾಣಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ.

ಇದನ್ನೂ ಓದಿ – ಒಂದೇ ಒಂದು ವಾಟ್ಸಪ್ ಮೆಸೇಜ್ನಿಂದಾಗಿ ₹3,65,892 ಹಣ ನಾಪತ್ತೆ, ಆಗಿದ್ದೇನು?
ನಗರದಲ್ಲಿ ಹೆಚ್ಚುತ್ತಿರುವ ಉಷ್ಣಾಂಶ ತಗ್ಗಿಸಲು ಸಾರ್ವಜನಿಕರು ಹೆಚ್ಚಿನ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಸುಂದರೇಶ್ ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸೂಡಾ ಎಇಇ ಬಸವರಾಪ್ಪ, ಎಇಇ ಗಂಗಾಧರಸ್ವಾಮಿ, ಮುಖಂಡರು, ಬಡಾವಣೆಗಳ ನಿವಾಸಿಗಳು, ಆಟೋ ಚಾಲಕರು, ಸಾರ್ವಜನಿಕರು ಹಾಜರಿದ್ದರು.

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





