ಶಿವಮೊಗ್ಗ ಕಾಂಗ್ರೆಸ್‌ ಕಾರ್ಯಕರ್ತರಿಗೆ ಗುಡ್‌ ನ್ಯೂಸ್‌, ಇನ್ನು ಹತ್ತು ದಿನದಲ್ಲಿ ಪಟ್ಟಿ ರಿಲೀಸ್‌ಗೆ ಎಐಸಿಸಿ ಉಸ್ತುವಾರಿ ಸೂಚನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 JANUARY 2024

SHIMOGA : ಇನ್ನು ಹತ್ತು ದಿನದಲ್ಲಿ ವಿವಿಧ ಸಮಿತಿಗಳಿಗೆ ನೇಮಕ‌ ನಡೆಯಲಿದೆ. ಅಧಿಕಾರ ವಿಕೇಂದ್ರಿಕರಣ ಮಾಡದೆ ಇರುವುದೆ ಬಿಜೆಪಿ ಸೋಲಿಗೆ ಕಾರಣ. ಈ ತಪ್ಪನ್ನು ಕಾಂಗ್ರೆಸ್ ಮಾಡಲ್ಲ ಎಂದು ಎಐಸಿಸಿ ಉಸ್ತುವಾರಿ ಮಯೂರ್‌ ಜೈನ್‌ ತಿಳಿಸಿದರು.

ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಯೂರ್ ಜೈನ್‌, ಲೋಕಸಭೆ ಚುನಾವಣೆ ಕುರಿತು ಪ್ರಮುಖ ಮಾಹಿತಿ ತಿಳಿಸಿದರು.

ಮಯೂರ್‌ ಜೈನ್ ಹೇಳಿದ 3 ಪ್ರಮುಖಾಂಶ

POINT-1ಇನ್ನು ಹತ್ತು ದಿನದಲ್ಲಿ ವಿವಿಧ ಸಮಿತಿಗಳಿಗೆ ನೇಮಕ‌ ನಡೆಯಲಿದೆ. ಸಮಿತಿ ನೇಮಕದಲ್ಲಿ ಎಲ್ಲ ವರ್ಗದವರಿಗೂ ಮೀಸಲು ಇರಲಿದೆ. ಜಿಲ್ಲಾ ಕಾಂಗ್ರೆಸ್‌ನಿಂದ ಹತ್ತು ದಿನದಲ್ಲಿ ಪಟ್ಟಿ ಬಿಡುಗಡೆಯಾಗಬೇಕು. ಇಲ್ಲದಿದ್ದಲ್ಲಿ ನಾನೇ ಪಟ್ಟಿ ಸಿದ್ದ ಮಾಡುತ್ತೇನೆ‌. ಪಕ್ಷಕ್ಕೆ ದುಡಿದವರಿಗೆ ಸ್ಥಾನ ಸಿಗಬೇಕು ಎಂಬುದು ನಮ್ಮ ಆಶಯ.‌

Congress Party Meeting in Shimoga

POINT-2ಬಿಜೆಪಿ ನೀಡಿದ ಶೇ.90ರಷ್ಟು ಭರವಸೆಗಳನ್ನು ಈಡೇರಿಸಲಿಲ್ಲ. ಜನ ಬಿಜೆಪಿಯ ಮೇಲೆ ನಂಬಿಕೆ‌ ಕಳೆದುಕೊಂಡಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಅವರು ಭರವಸೆಯ ಆಡಳಿತ ನೀಡುತ್ತಿದ್ದಾರೆ. ಕಾಂಗ್ರೆಸ್ ನೀಡಿದ ಐದು ಭರವಸೆಗಳನ್ನು ಈಡೇರಿಸಲಾಗಿದೆ. ತಮಿಳುನಾಡಿನ ಸರಕಾರ ತನ್ನ ಗ್ಯಾರಂಟಿ ಈಡೇರಿಸಲು ಎರಡು ವರ್ಷ ಬೇಕಾಯಿತು. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಕೆಲವೆ ತಿಂಗಳಲ್ಲಿ ಅವುಗಳನ್ನು ಜಾರಿಗೆ ತಂದಿದೆ.

Congress Party Meeting in Shimoga

POINT-3ಲೋಕಸಭೆ ಚುನಾವಣೆಗೆ ಹೆಚ್ಚಿನ ಸಮಯವಿಲ್ಲ.‌ ಫೆಬ್ರವರಿ ಕೊನೆ ವಾರದಲ್ಲಿ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಈಗ ರಾಹುಲ್ ಗಾಂಧಿ ಭಾರತ್ ಜೋಡೊ ನ್ಯಾಯ ಯಾತ್ರೆ ಆರಂಭಿಸಿದ್ದಾರೆ. ದೇಶದ ಐಕ್ಯತೆ, ಸಮಗ್ರತೆಗೆ ಇದನ್ನು ಆರಂಭಿಸಿದ್ದಾರೆ. ರಾಹುಲ್ ಕಾಂಗ್ರೆಸ್‌ಗೆ ಬಹಳಷ್ಟು ದುಡಿದಿದ್ದಾರೆ. ಅವರನ್ನು 2024 ರಲ್ಲಿ ಪ್ರಧಾನ ಮಂತ್ರಿಯಾಗಿ ಮಾಡಬೇಕಿದೆ.

ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಆಯನೂರು ಮಂಜುನಾಥ್, ವಿಧಾನ ಪರಿಷತ್‌ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಪ್ರಮುಖರಾದ ಹೆಚ್.ಸಿ. ಯೋಗೀಶ್, ಗೋಣಿ ಮಾಲತೇಶ್, ನಾಗರಾಜ್ ಗೌಡ, ಶ್ರೀನಿವಾಸ್ ಕರಿಯಣ್ಣ, ಅನಿತಾ ಕುಮಾರಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ‘ಬಿಜೆಪಿಯಲ್ಲಿ ಮಾತ್ರ ಅವರಿಗೆ ಗುರುಬಲ, ಕಾಂಗ್ರೆಸ್‌ನಿಂದ ತಮಗೆ ಟಿಕೆಟ್‌ ಖಚಿತʼ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 22, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment