ಜೈಲ್ ಸರ್ಕಲ್’ನಲ್ಲಿ ಆಟೋ ಹತ್ತಿ ಐದು ಲಕ್ಷದ ವಸ್ತುಗಳನ್ನು ಬಿಟ್ಟು ಹೋದ ಪ್ರಯಾಣಿಕ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಪ್ರಯಾಣಿಕರೊಬ್ಬರು ಆಟೋದಲ್ಲೇ ಬಿಟ್ಟು ಹೋಗಿದ್ದ ಐದು ಲಕ್ಷ ಮೌಲ್ಯದ ವಸ್ತುಗಳನ್ನು ಚಾಲಕ ಪೊಲೀಸರಿಗೆ ಒಪ್ಪಿಸಿ, ವಾರಸುದಾರರಿಗೆ ಸೇರುವಂತೆ ನೋಡಿಕೊಂಡು ಪ್ರಾಮಾಣಿಕತೆ ಮೆರೆದಿದ್ದಾರೆ.

ಕರ್ನಾಟಕ ಸಂಘದ ಆಟೋ ನಿಲ್ದಾಣದ ಚಾಲಕ ಮಜೀದ್ ಅವರು ಐದು ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಲ್ಲದೆ ವಾರಸುದಾರರ ಕೈ ಸೇರುವಂತೆ ನೋಡಿಕೊಂಡಿದ್ದಾರೆ.

ಏನಿದು ಪ್ರಕರಣ?

ಜೈಲ್ ರಸ್ತೆಯಲ್ಲಿ ಪ್ರಯಾಣಿಕರೊಬ್ಬರು ಆಟೋ ಹತ್ತಿದ್ದರು. ಗುಂಡಪ್ಪ ಶೆಡ್ ತನಕ ಆಟೋದಲ್ಲಿ ತೆರಳಿದ್ದರು. ಇಳಿಯುವಾಗ ಗಡಿಬಿಡಿಯಲ್ಲಿ ಕೆಲವು ವಸ್ತುಗಳನ್ನು ಆಟೋದಲ್ಲೇ ಬಿಟ್ಟು ಹೋಗಿದ್ದರು. ಇದನ್ನು ಗಮನಿಸಿದ ಚಾಲಕ ಮಜೀದ್, ನೇರವಾಗಿ ಕೋಟೆ ಠಾಣೆಗೆ ಬಂದು ವಸ್ತುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ADVT JULY NANJAPPA HOSPITAL HOME LAB TESTING

ಐದು ಲಕ್ಷ ಮೌಲ್ಯದ ವಸ್ತುಗಳು

ಮಜೀದ್ ತಂದುಕೊಟ್ಟ ವಸ್ತುಗಳನ್ನು ಪರಿಶೀಲಿಸಿದ ಪೊಲೀಸರು, ಅವು ಸೋಗಾನೆಯ ರಮೇಶ್ ಎಂಬುವವರಿಗೆ ಸೇರಿದ್ದು ಎಂಬುದನ್ನು ಖಚಿತಪಡಿಸಿಕೊಂಡರು. ಅವರನ್ನು ಸಂಪರ್ಕಿಸಿ ಠಾಣೆಗೆ ಬರುವಂತೆ ಸೂಚಿಸಿ, ವಸ್ತುಗಳನ್ನು ಹಸ್ತಾಂತರಿಸಿದರು. ರಮೇಶ್ ಅವರು ಹೊಯ್ಸಳ ಕೋ ಆಪರೇಟಿವ್ ಸೊಸೈಟಿಯ ಕಾರ್ಯದರ್ಶಿಯಾಗಿದ್ದಾರೆ. ಸೊಸೈಟಿಗೆ ಸೇರಿದ ಚೆಕ್ ಬುಕ್’ಗಳು, ಸೋಗಾನೆಯಲ್ಲಿ ವಿಮಾನ ನಿಲ್ದಾಣಕ್ಕೆ ಹೋಗಿರುವ ಜಮೀನಿನ ದಾಖಲೆಗಳು, ಕೆಲ ಬಾಂಡ್’ಗಳು ಸೇರಿ ಐದು ಲಕ್ಷ ಮೌಲ್ಯದ ವಸ್ತುಗಳನ್ನು ಬಿಟ್ಟು ಹೋಗಿದ್ದರು.

ಆಟೋ ಚಾಲಕ ಮಜೀದ್ ಅವರ ಕಾರ್ಯಕ್ಕೆ ಪೊಲೀಸರು, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment