SHIVAMOGGA LIVE NEWS | 7 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ಕಡೇ ಕ್ಷಣದಲ್ಲಿ ಶಿವಮೊಗ್ಗ – ತಿರುಪತಿ ವಿಮಾಯನ ಹಾರಾಟ ರದ್ದುಗೊಳಿಸಲಾಗಿದೆ. ಇದರಿಂದ ಅಕ್ರೋಶಗೊಂಡ ಪ್ರಯಾಣಿಕರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸ್ಟಾರ್ ಏರ್ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ವಿಡಿಯೋ ಶಿವಮೊಗ್ಗ ಲೈವ್.ಕಾಂಗೆ ಲಭ್ಯವಾಗಿದೆ.
ದಿಢೀರ್ ರದ್ದಾಗಿದ್ದೇಕೆ ವಿಮಾನ?
ಸ್ಟಾರ್ ಏರ್ ಸಂಸ್ಥೆಯು ಶಿವಮೊಗ್ಗದಿಂದ ಹೈದರಾಬಾದ್, ತಿರುಪತಿ ಮತ್ತು ಗೋವಾಗೆ ವಿಮಾನಯಾನ ಸೇವೆ ಒದಗಿಸುತ್ತಿದೆ. ಶನಿವಾರ ಬೆಳಗ್ಗೆ ವಿಮಾನವು ಹೈದರಾಬಾದ್ನಿಂದ ಶಿವಮೊಗ್ಗಕ್ಕೆ ಆಗಮಿಸಿತ್ತು. ಬಳಿಕ ಶಿವಮೊಗ್ಗದಿಂದ ತಿರುಪತಿಗೆ ತೆರಳಬೇಕಿತ್ತು. ಆದರೆ ಕಡೆಯ ಕ್ಷಣದಲ್ಲಿ ತಿರುಪತಿ ಮಾರ್ಗದ ಪ್ರಯಾಣ ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಯಿತು. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಸ್ಟಾರ್ ಏರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಅಧಿಕಾರಿಗಳಿಗೆ ಪ್ರಯಾಣಿಕರ ಕ್ಲಾಸ್
ಸ್ಟಾರ್ ಏರ್ ಸಂಸ್ಥೆ ದಿಢೀರ್ ಪ್ರಯಾಣ ರದ್ದುಗೊಳಿಸಿದ್ದು ಇದೇ ಮೊದಲೇನಲ್ಲ. ಶಿವಮೊಗ್ಗದಲ್ಲಿ ತನ್ನ ಸೇವೆ ಆರಂಭಿಸಿದ ಅತ್ಯಂತ ಕಡಿಮೆ ಅವಧಿಯಲ್ಲಿ ಹಲವು ಭಾರಿ ಹಾರಾಟ ರದ್ದು ಮಾಡಿದೆ. ಹಾಗಾಗಿ ಪದೇ ಪದೆ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ ಮಹಿಳೆಯೊಬ್ಬರು ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ಸ್ಟಾರ್ ಏರ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಕೇವಲ 13 ಪ್ರಯಾಣಿಕರು ಇದ್ದರು ಎಂಬ ಕಾರಣಕ್ಕೆ ಪ್ರಯಾಣ ರದ್ದುಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಸ್ಟಾರ್ ಏರ್ ವಿರುದ್ಧ ದೂರು
ದಿಢೀರ್ ಪ್ರಯಾಣ ರದ್ದು ಮಾಡುತ್ತಿರುವ ಸ್ಟಾರ್ ಏರ್ ವಿರುದ್ಧ ನಾಗರಿಕ ವಿಮಾನಯಾನ ಸೇವೆ ಪ್ರಾಧಿಕಾರ ಮತ್ತು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ದೂರು ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ. ಪ್ರಯಾಣಿಕರು ನಿಗದಿತ ನಿಲ್ದಾಣಕ್ಕೆ ತಲುಪಿ ಅಲ್ಲಿಂದ ಮುಂದಿನ ಪ್ರಯಾಣಕ್ಕೆ ವಿಮಾನಗಳ ಸೀಟ್ ಬುಕ್ ಮಾಡಿರುತ್ತಾರೆ, ಯಾವುದಾದರು ಸಭೆಗೆ ತೆರಳುವವರಿರುತ್ತಾರೆ. ಶಿವಮೊಗ್ಗದಲ್ಲಿ ವಿಮಾನ ದಿಢೀರ್ ರದ್ದಾದರೆ ನಿಗದಿತ ಸಮಯಕ್ಕೆ ಅಲ್ಲಿಗೆ ತಲುಪಲಾಗದೆ ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು ದೂರು ಸಲ್ಲಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಇದನ್ನೂ ಓದಿ – ಹೆದ್ದಾರಿಯಲ್ಲಿ ಮೂವರಿಗೆ ಅಪ್ಪಳಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






