ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಮಹಾನಗರ ಪಾಲಿಕೆಯಲ್ಲಿ ಡಿ ದರ್ಜೆ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಲೋಡರ್ಗಳ ಸೇವೆಯನ್ನು ಕಾಯಂಗೊಳಿಸಿ, ಸೇವಾ ಭದ್ರತೆ ಮತ್ತು ಸಮಾನ ವೇತನ ನೀಡುವಂತೆ ಒತ್ತಾಯಿಸಿ ಡಾ.ಭೀಮರಾವ್ ಅಂಬೇಡ್ಕರ್ ಗುತ್ತಿಗೆ ಪೌರಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪೌರ ಕಾರ್ಮಿಕರು, ಕಾಯಂ ನೌಕರರ ಹಾಗೆ ಲೋಡರ್ಗಳು ಕಳೆದ 12 ವರ್ಷದಿಂದ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ. ಸುಮಾರು ನೂರು ಲೋಡರ್ಗಳು ಹಗಲು ರಾತ್ರಿ ದುಡಿದರೂ ಸಮಾನ ವೇತನ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ಪಾಲಿಕೆಯಲ್ಲಿ ನೀಡುತ್ತಿರುವ ವೇತನದಿಂದ ಮನೆ ಬಾಡಿಗೆ, ಮಕ್ಕಳ ಶಿಕ್ಷಣ ಮತ್ತು ಜೀವನ ನಡೆಸುವುದು ಕಷ್ಟವಾಗಿದೆ. ಕೋವಿಡ್ ನಿಯಂತ್ರಣದ ವಿಚಾರದಲ್ಲಿ ಉಳಿದ ನೌಕರರ ಹಾಗೆಯೇ ನಾವು ದುಡಿಯುತ್ತಿದ್ದೇವೆ. ಹಾಗಾಗಿ ತಮ್ಮ ಸೇವೆ ಕಾಯಂಗೊಳಿಸಿ, ಸಮಾನ ವೇತನ ನೀಡಬೇಕು ಎಂದು ಪೌರ ಕಾರ್ಮಿಕರು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















