NEWS HIGHLIGHTS
ಶಿವಮೊಗ್ಗ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು ಹಾಗೂ ಮಾಲೀಕರುಗಳು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಒಂದು ವೇಳೆ ನಿಗದಿತ ಅವಧಿಯೊಳಗೆ ಬಾಕಿ ಕಂದಾಯ ಪಾವತಿಸದೇ ಇದ್ದಲ್ಲಿ, ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:➤ ಶಿವಮೊಗ್ಗದಲ್ಲಿ ಆರೋಗ್ಯ ಸಚಿವರ ಸಭೆ, ವೈದ್ಯರು, ಅಧಿಕಾರಿಗಳಿಗೆ ಕಟ್ಟುನಿಟ್ಟು ಸೂಚನೆ, ಏನೇನೆಲ್ಲ ಚರ್ಚೆಯಾಯ್ತು?