SHIVAMOGGA LIVE NEWS | 12 MARCH 2024
SHIMOGA : ಕೆಎಸ್ಆರ್ಟಿಸಿ ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಿಂದ ಹಣ ಕಳ್ಳತನ ಮಾಡಲಾಗಿದೆ. ಬಸ್ಸಿನಲ್ಲಿ ಟಿಕೆಟ್ ಖರೀದಿಗೆ ಹಣಕ್ಕಾಗಿ ಜೇಬಿಗೆ ಕೈ ಹಾಕಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಭದ್ರಾವತಿ ಮಾಳೇನಹಳ್ಳಿಯ ಕಾಂತರಾಜ್ ಶಾಸ್ತ್ರಿ ಎಂಬುವವರು 16,500 ರೂ. ಕಳೆದುಕೊಂಡಿದ್ದಾರೆ. ಶಿವಮೊಗ್ಗದ ಟಿವಿ ಶೋ ರೂಂ ಒಂದರಲ್ಲಿ ಟಿವಿ ಖರೀದಿಗೆ ಕಾಂತರಾಜ್ ಶಾಸ್ತ್ರಿ ಆಗಮಿಸಿದ್ದರು. ಆದರೆ ಟಿವಿ ಖರೀದಿಸಲಾಗದೆ, ತರೀಕೆರೆಯ ಸಂಬಂಧಿಯ ಮನೆಗೆ ತೆರಳಲು ಶಿವಮೊಗ್ಗ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಈ ವೇಳೆ ಹಣ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ ಕುರಿತು ನಿಮಗೆಷ್ಟು ಗೊತ್ತು? ಇಲ್ಲಿದೆ 10 ಪ್ರಮುಖ ಪಾಯಿಂಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200