15 ದಿನ, 10 ರಾಜ್ಯಗಳು, ಶಿವಮೊಗ್ಗದಿಂದ ಬೈಕ್‌ ಯಾತ್ರೆ ಶುರು, ಪೊಲೀಸ್‌ ಸಿಬ್ಬಂದಿಯ ಸಾಹಸ, ಉದ್ದೇಶವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 15 FEBRUARY 2024

SHIMOGA : ಕಾನೂನು ರಕ್ಷಣೆಗಾಗಿ ಲಾಠಿ ಹಿಡಿಯುವುದು, ದಂಡ ವಿಧಿಸುವುದಷ್ಟೇ ಪೊಲೀಸರ ಕರ್ತವ್ಯವಲ್ಲ. ಅಪರಾಧ ತಡೆಗೆ ಜನರಲ್ಲಿ ಕಾನೂನು ಅರಿವು ಮೂಡಿಸುವುದು ಕೂಡ ಖಾಕಿ ತೊಟ್ಟವರ ಪ್ರಮುಖ ಉದ್ದೇಶ. ಇದಕ್ಕಾಗಿ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಮಧ್ಯೆ ಶಿವಮೊಗ್ಗದ ಪೊಲೀಸ್‌ ಸಿಬ್ಬಂದಿಯೊಬ್ಬರು ಜನಜಾಗೃತಿಗಾಗಿ ಬೈಕ್‌ ಏರಿದ್ದಾರೆ. ದೇಶ ಪರ್ಯಟನೆ ಆರಂಭಿಸಿದ್ದಾರೆ.

ಶಿವಮೊಗ್ಗದ ಮಹಿಳಾ ಠಾಣೆ ಸಿಬ್ಬಂದಿ ಸತೀಶ್‌ ಕುಬಟೂರು ಅವರು ಇಂದಿನಿಂದ 15 ದಿನ 10 ರಾಜ್ಯಗಳಲ್ಲಿ ಬೈಕ್‌ ಯಾತ್ರೆ ನಡೆಸಲಿದ್ದಾರೆ. ಸತೀಶ್‌ ಅವರ ಈ ಸಾಹಸಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಚಾಲನೆ ನೀಡಿದರು.

ಎಲ್ಲೆಲ್ಲಿ ತೆರಳಲಿದೆ ಯಾತ್ರೆ? ಉದ್ದೇಶವೇನು?

ಸತೀಶ್‌ ಕುಬಟೂರು ಅವರು ಶಿವಮೊಗ್ಗದಿಂದ ಯಾತ್ರೆ ಆರಂಭಿಸಿದ್ದಾರೆ. ಇಲ್ಲಿಂದ ಮಹಾರಾಷ್ಟ್ರದ ಮೂಲಕ ದೆಹಲಿವರೆಗು ತೆಲುಪಲಿದ್ದಾರೆ. ಸ್ವಂತ ಖರ್ಚಿನಲ್ಲಿ ಸುಮಾರು 4000 ಕಿ.ಮೀ. ಬೈಕ್‌ ಯಾತ್ರೆ ಮಾಡಲಿದ್ದಾರೆ. ಇನ್ನು, ದಾರಿ ಉದ್ದಕ್ಕೂ ಸಾರ್ವಜನಿಕರು ಮತ್ತು ಶಾಲೆಗಳಿಗೆ ಭೇಟಿ ನೀಡಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಬೈಕ್‌ ಯಾತ್ರೆಯ ಪ್ರಮುಖ ಉದ್ದೇಶ.

ಮಾನವ ಕಳ್ಳ ಸಾಗಣೆ, ಪೋಕ್ಸೋ, ಸಂಚಾರ ನಿಯಮಗಳ ಕುರಿತು ಜಾಗೃತಿ ಯಾತ್ರೆಯ ಉದ್ದೇಶ. ನಾಗರಿಕ ಹಕ್ಕು ಮತ್ತು ಕರ್ತವ್ಯಗಳ ಕುರಿತು ಜನರು, ವಿದ್ಯಾರ್ಥಿಗಳಿಗೆ ತಿಳಿವಳಿಕೆ ಮೂಡಿಸಲಾಗುತ್ತದೆ. ಅದಕ್ಕಾಗಿ ಕರಪತ್ರಗಳನ್ನು ಕೂಡ ಮುದ್ರಿಸಿಕೊಂಡಿದ್ದೇನೆ. ರಾಜ್ಯ ವ್ಯಾಪ್ತಿಯಲ್ಲಿ ಕನ್ನಡದಲ್ಲಿಯೇ ಕರಪತ್ರ ಹಂಚುತ್ತೇನೆ. ಉಳಿದ ರಾಜ್ಯಗಳಲ್ಲಿ ಇಂಗ್ಲೀಷ್‌ ಕರಪತ್ರಗಳನ್ನು ಹಂಚಲಿದ್ದೇನೆ.ಸತೀಶ್‌ ಕುಬಟೂರು, ಪೊಲೀಸ್‌ ಸಿಬ್ಬಂದಿ

satish-bike-ride

ಸತೀಶ್‌ ಅವರ ಈ ಕಾರ್ಯಕ್ಕೆ ಪೊಲೀಸ್‌ ಇಲಾಖೆ ಕೂಡ ಬೆಂಬಲವಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮತ್ತು ಹಿರಿಯ ಅಧಿಕಾರಿಗಳು ಅಗತ್ಯ ಮಾಹಿತಿ, ಸಲಹೆ ನೀಡಿದ್ದಾರೆ. ಸದಾ ಕಾರ್ಯದೊತ್ತಡ ಮತ್ತು ಬಂದೋಬಸ್ತ್‌ನಲ್ಲಿ ನಿರತವಾಗಿರುವ ಪೊಲೀಸ್‌ ಸಿಬ್ಬಂದಿ, ಜನ ಜಾಗೃತಿಗಾಗಿ ವಿಭಿನ್ನ ಪ್ರಯತ್ನ ಮಾಡಿರುವುದು ಜನ ಮೆಚ್ಚುಗೆ ಪಡೆದಿದೆ.

satish-police

ಇದನ್ನೂ ಓದಿ – ಗೋಪಿ ಸರ್ಕಲ್‌ನಲ್ಲಿ ಲಿಂಗ ಪೂಜೆ, ಮೀಸಲಾತಿಗಾಗಿ ಆಗ್ರಹ, ಸರ್ಕಾರದ ವಿರುದ್ಧ ಯತ್ನಾಳ್‌ ಆಕ್ರೋಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 15, 2024

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಕಾರಿನಲ್ಲಿ ದಿಢೀರ್‌ ಬೆಂಕಿ, ಕೆಲವೇ ಕ್ಷಣದಲ್ಲಿ ಮುಂಭಾಗ ಆಹುತಿ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

ಜಯನಗರ ಪೊಲೀಸ್‌ ಠಾಣೆಯಲ್ಲಿ 8 ವಾಹನಗಳ ಹರಾಜು, ದಿನಾಂಕ ಪ್ರಕಟ

Leave a Comment