ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020
ಹಾಫ್ ಡೇ ಲಾಕ್ ಡೌನ್ ಜಾರಿಯಾದರೂ ರಸ್ತೆಗಿಳಿದಿದ್ದ ವಾಹನಗಳ ತಪಾಸಣೆಗೆ ಖಾಕಿ ಪಡೆ ಫೀಲ್ಡಿಗಿಳಿದಿದೆ. ಪ್ರಮುಖ ಸರ್ಕಲ್ ಮತ್ತು ರಸ್ತೆಗಳಲ್ಲಿ ವಾಹನಗಳನ್ನು ತಡೆದು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಗಾಂಧಿ ಬಜಾರ್ನಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್ ಅಂಗಡಿಗಳನ್ನು ಬಂದ್ ಮಾಡಿಸಿದರು. ವಾಹನಗಳನ್ನು ತಡೆದು ತಪಾಸಣೆ ನಡೆಸಿ, ಅವುಗಳನ್ನು ಸೀಜ್ ಮಾಡುವಂತೆ ಪೊಲೀಸರಿಗೆ ತಿಳಿಸಿದರು.

ಮತ್ತೊಂದೆಡೆ ಅಮೀರ್ ಅಹಮದ್ ಸರ್ಕಲ್ನಲ್ಲಿ ಡಿವೈಎಸ್ಪಿ ಈಶ್ವರ್ ಉಮೇಶ್ ನಾಯ್ಕ್ ಅವರು ವಾಹನಗಳ ತಪಾಸಣೆ ನಡೆಸಿದರು. ಇನ್ನು ಆಲ್ಕೊಳ ಸರ್ಕಲ್ನಲ್ಲಿ ಗ್ರಾಮಾಂತರ ಪೊಲೀಸ್ ಠಾನೆ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ನೇತೃತ್ವದಲ್ಲಿ ತಪಾಸಣೆ ನಡೆಸಿ, ಸರಿಯಾದ ಕಾರಣ ನೀಡದ ರಸ್ತೆಗಿಳಿದ ವಾಹನಗಳನ್ನು ವಶಕ್ಕೆ ಪಡೆಯಲಾಯಿತು.
ನಗರದ ಹಲವೆಡೆ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗಳು ವಾಹನ ತಡೆದು ಕಾರಣ ಕೇಳುತ್ತಿದ್ದಾರೆ. ಅಗತ್ಯ ಸೇವೆಗಳಿಗಾಗಿ ಓಡಾಡುವವರಿಗೆ ಮಾತ್ರ ಅವಕಾಶವಿದೆ.
ಜನ ಸಂಚಾರಕ್ಕೆ ಕಾರಣವೇನು?
ಬ್ಯಾಂಕು, ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರಿ ನೌಕರರು ಓಡಾಡುತ್ತಿದ್ದಾರೆ. ಆಸ್ಪತ್ರೆ ಸಿಬ್ಬಂದಿ, ರೈತರು ಓಡಾಡಲು ಅವಕಾಶವಿದೆ. ಇದರ ಹೊರತಾಗಿ ಬಹುತೇಕರು ಆಸ್ಪತ್ರೆಗೆ ಬಂದಿರುವ ನೆಪ ಹೇಳುತ್ತಿದ್ದಾರೆ. ಇನ್ನೂ ಕಲೆವರು ಮೆಡಿಕಲ್ ಶಾಪ್ಗೆ ತೆರಳುತ್ತಿರುವುದಾಗಿ ತಿಳಿಸುತ್ತಿದ್ದಾರೆ. ಕೆಲವರಂತೂ ಬೇರೆ ಊರಿನಿಂದ ಬಂದಿದ್ದು, ಊರಿಗೆ ಮರಳುತ್ತಿರುವ ಸಬೂಬು ಹೇಳುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















