ಶಿವಮೊಗ್ಗ LIVE
ಶಿವಮೊಗ್ಗ: ಸದಾ ಕಾನೂನು ಸುವ್ಯವಸ್ಥೆ ಪಾಲನೆ ಮಾಡುವ ಪೊಲೀಸರು, ತಮ್ಮ ಮಕ್ಕಳು ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸುವುದನ್ನು ಕಂಡು ಸಂತಸಪಟ್ಟರು.
ಜಿಲ್ಲಾ ಪೊಲೀಸ್ ಇಲಾಖೆಯಿಂದ ಭಾನುವಾರ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಮಕ್ಕಳ ಕ್ರೀಡಾಕೂಟವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಉದ್ಘಾಟಿಸಿದರು. ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸಿದ್ದ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಶುಭ ಕೋರಿದರು.

ಕ್ರೀಡಾಕೂಟದಲ್ಲಿ ಕಪ್ಪೆ ಜಿಗಿತ, ಓಟ, ಬಕೆಟ್ಗೆ ಬಾಲ್ ಎಸೆಯುವುದು, ಹಿಟ್ ದ ವಿಕೆಟ್, ಗುಂಡು ಎಸೆತ ಹಾಗೂ ಸ್ಲೋ ಸೈಕಲ್ ರೇಸ್ ಸ್ಪರ್ಧೆಗಳನ್ನು ಮಕ್ಕಳ ವಯೋಮಿತಿಗೆ ಅನುಗುಣವಾಗಿ ನಡೆಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ವಿಶೇಷ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ರಮೇಶ್ ಕುಮಾರ್, ಡಿಎಆರ್ ಪೊಲೀಸ್ ಉಪಾಧೀಕ್ಷಕ ದಿಲೀಪ್, ಆರ್ಪಿಐ ಸೋಮಶೇಖರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕುಟುಂಬದವರಿದ್ದರು.




ಇದನ್ನೂ ಓದಿ » ಸ್ವಂತ ಹಣದಲ್ಲಿ ಹೆದ್ದಾರಿಯ ಅಪಾಯಕಾರಿ ಗುಂಡಿ ಮುಚ್ಚಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





