ರಸ್ತೆ ಗುಂಡಿ ಮುಚ್ಚಿದ ಶಿವಮೊಗ್ಗ ಟ್ರಾಫಿಕ್ ಪೊಲೀಸರು, ಫೋಟೊ ವೈರಲ್, ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಜನ ಗರಂ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021

ಸ್ಮಾರ್ಟ್ ಸಿಟಿ ಕಾಮಗಾರಿಯ ನಿಧಾನಗತಿಗೆ ಶಿವಮೊಗ್ಗದಲ್ಲಿ ವಾಹನ ಚಾಲಕರು ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ಪ್ರತಿ ರಸ್ತೆಯೂ ಗುಂಡಿಮಯವಾಗಿದೆ. ಈ ಮಧ್ಯೆ ಸಂಚಾರಿ ಪೊಲೀಸರೆ ಗುಂಡಿಗಳಿಗೆ ಮಣ್ಣು ಹಾಕಿ ವಾಹನ ಸವಾರರಿಗೆ ನೆರವಾಗಿದ್ದಾರೆ. ಇದರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜೈಲ್ ಸರ್ಕಲ್’ನಲ್ಲಿ ಕುವೆಂಪು ರಸ್ತೆಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ. ಸ್ಮಾರ್ಟ್ ಸಿಟಿ ಅಧಿಕಾರಿಗಳು ಸರಿಯಾಗಿ ಮಣ್ಣು ಮುಚ್ಚಿಸದೆ ಇರುವುದರಿಂದ ವಾಹನ ಸವಾರರು ಇಲ್ಲಿ ಸಂಚರಿಸಲು ಪರದಾಡುತ್ತಿದ್ದರು. ಇದನ್ನು ಸಂಚಾರಿ ಠಾಣೆ ಪೊಲೀಸರು ತಾವೆ ಮಣ್ಣು ಹಾಕಿದರು.

ಸಂಚಾರಿ ಠಾಣೆ ಎಎಸ್ಐ ಮಂಜುನಾಥ್, ಚಾಲಕ ಪ್ರಕಾಶ್, ಸಿಬ್ಬಂದಿ ಹನುಮಂತಪ್ಪ ಅವರು ಜೈಲ್ ಸರ್ಕಲ್’ನಲ್ಲಿ ಗುಂಡ ಮುಚ್ಚಿದ್ದಾರೆ. ಪಕ್ಕದಲ್ಲಿದ್ದ ಮಣ್ಣು ತಂದು ತಾವೆ ಗುಂಡಿಗೆ ಸುರಿದು ಸಮತಟ್ಟು ಮಾಡಿದ್ದಾರೆ.

ಗುಂಡಿಗಳು ಸಾರ್ ಬರಿ ಗುಂಡಿಗಳು

ಕುವೆಂಪು ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ಕೆಲಸ ಆರಂಭಿಸಿದಾಗಿನಿಂದ ವಾಹನ ಸವಾರರು ನಿತ್ಯ ನರಕ ದರ್ಶನ ಮಾಡುತ್ತಿದ್ದಾರೆ. ಒಮ್ಮೆ ಗುಂಡಿ ತೋಡಿ ಮುಚ್ಚಲಾಗಿತ್ತು. ಈಗ ಪುನಃ ಗುಂಡಿ ಅಗೆಯಲಾಗಿದೆ. ಜೈಲ್ ಸರ್ಕಲ್ ಕಡೆಯಿಂದ ನಂಜಪ್ಪ ಆಸ್ಪತ್ರೆ ಕಡೆಗೆ ಹೋಗುವ ಮಾರ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ. ಈ ಗುಂಡಿಯಿಂದಾಗಿ ಹಲವು ವಾಹನ ಸವಾರರು ಗಾಯಗೊಂಡಿದ್ದಾರೆ. ವಾಹನಗಳು ಕೂಡ ಹಾನಿಯಾಗಿವೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಸ್ಮಾರ್ಟ್ ಸಿಟಿ ಅಧಿಕಾರಿಗಳು ಗುಂಡಿಗೆ ಸರಿಯಾಗಿ ಮಣ್ಣು ಮುಚ್ಚಿರಲಿಲ್ಲ. ಹಾಗಾಗಿ ವಾಹನಗಳು ಓಡಾಡುವಾಗ ಗುಂಡಿಯ ಆಳ ಹೆಚ್ಚಾಗಿ ವಾಹನಗಳು ಹಾನಿಯಾಗುತ್ತಿದ್ದವು. ಇದನ್ನು ಗಮನಿಸಿದ ಪೊಲೀಸರು ತಾವೆ ಮಣ್ಣು ಮುಚ್ಚಿದ್ದಾರೆ.

AVvXsEg43JOQBGRyerGxgP4x0ED9BoeB2ZZq34ZaKbOlzKkp5ZBhAOZRmycfVpc8pbmsn95UBCfZCHAhbTdEP0YPaA6bJwPpEGiqDXwn9WdzcMrgNIdeP9gVhmDCUkVXm6b9Ahur k9yA09J6CNXZ

ಗುಂಡಿಗೆ ಬಿದ್ದು ಗಾಯಗೊಂಡಿವರಿದ್ದಾರೆ

ಗುಂಡಿ ತೋಡಿ ತಿಂಗಳುಗಟ್ಟಲೆ ಹಾಗೆ ಬಿಡುವುದರಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳು ಹೆಸರುವಾಸಿ. ಕುವೆಂಪು ರಸ್ತೆಯಲ್ಲಿ ಈ ಗುಂಡಿಗೆ ಬಿದ್ದು ಹಲವರು ಗಾಯಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಬೈಕ್ ಸವಾರರೊಂದು ಬೈಕ್ ಸಹಿತ ಗುಂಡಿಗೆ ಬಿದ್ದು ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಆರೈಕೆ ಮಾಡಿದ್ದರು.

ನಿಧಾನಗತಿ ಮತ್ತು ಪ್ಲಾನ್ ಮಾಡದೆ ಕಾಮಗಾರಿ ನಡೆಸುತ್ತಿರುವುದರಿಂದ ವಾಹನ ಜನರು ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

SHIVAMOGGA LIVE CONTATCT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 9, 2021

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment