ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 FEBRUARY 2024
SHIMOGA : ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಲಕ್ಷಾಂತರ ರೂ. ಮೌಲ್ಯದ ಗಾಂಜಾವನ್ನು ಪೊಲೀಸ್ ಇಲಾಖೆ ವತಿಯಿಂದ ನಾಶಪಡಿಸಲಾಯಿತು. ಶಿವಮೊಗ್ಗದ ಮಾಚೇನಹಳ್ಳಿಯ ಶುಶ್ರುತ ಬಯೋ ಮೆಡಿಕಲ್ ವೇಸ್ಟ್ ಮ್ಯಾನೇಜ್ಮೆಂಟ್ ಸೊಸೈಟಿಯಲ್ಲಿ 13.16 ಲಕ್ಷ ರೂ. ಮೌಲ್ಯದ ಗಾಂಜಾ ನಾಶಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
42 ಪ್ರಕರಣಗಳಲ್ಲಿ 34.825 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಇದರ ಮೌಲ್ಯ 13.16 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಮಾದಕ ವಸ್ತು ವಿಲೇವಾರಿ ಸಮಿತಿ ಅಧ್ಯಕ್ಷ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಗಾಂಜಾವನ್ನು ನಾಶಪಡಿಸಲಾಯಿತು.
ಪ್ರಕರಣವಾರು ಪ್ಯಾಕೆಟ್ನಲ್ಲಿ ತಂದು ನಾಶ
ವಿವಿಧ ಪ್ರಕರಣವಾರು ಗಾಂಜಾವನ್ನು ಪ್ಯಾಕ್ ಮಾಡಲಾಗಿತ್ತು. ಆಯಾ ಪ್ರಕರಣಕ್ಕೆ ಸಂಬಂಧಿಸಿದ ಗಾಂಜಾವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಯಿತು. ಈ ವೇಳೆ ಪೊಲೀಸ್ ಇಲಾಖೆ ವತಿಯಿಂದ ವಿಲೇವರಿಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಯಿತು. ಕೆಲವೇ ನಿಮಿಷದಲ್ಲಿ ಸಂಪೂರ್ಣ ಗಾಂಜಾವನ್ನು ನಾಶಪಡಿಸಲಾಯಿತು.
ಮಾಹಿತಿ ನೀಡಿದರೆ ಕಠಿಣ ಕ್ರಮ
ಇನ್ನು, ಗಾಂಜಾ ಮಾರಾಟ, ಸಾಗಟ, ಸಂಗ್ರಹಣೆ ಮತ್ತು ಬೆಳೆಯುವವರ ವಿರುದ್ಧ ಪೊಲೀಸ್ ಇಲಾಖೆಯಿಂದ ನಿರ್ದಾಕ್ಷಿಣ್ಯ ಮತ್ತು ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಗಾಂಜಾ ಕುರಿತು ಸಾರ್ವಜನಿಕರಿಗೆ ಮಾಹಿತಿ ತಿಳಿದುಬಂದಲ್ಲಿ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಸಹಕರಿಸಬೇಕು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ, ಅರ್ಜಿ ಸಲ್ಲಿಸಿದ ಶಿವಮೊಗ್ಗದ ಯುವಕರಿಗೆ ಕಾದಿತ್ತು ದೊಡ್ಡ ಆಘಾತ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















