| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 19 DECEMBER 2022
ಶಿವಮೊಗ್ಗ : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಬಂಧಿಸಿಲು ತೆರಳಿದ್ದಾಗ ಪೊಲೀಸರ ಮೇಲೆ ಆರೋಪಿಯೊಬ್ಬ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು (police firing) ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರವೀಣ್ ಅಲಿಯಾಸ್ ಮೋಟು ಪ್ರವೀಣ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇವತ್ತು ಬೆಳಗ್ಗೆ ಪ್ರವೀಣನನ್ನು ಬಂಧಿಸಲು ಪೊಲೀಸರ ತಂಡ ತೆರಳಿತ್ತು. ಈ ವೇಳೆ ಪೊಲೀಸ್ ಸಿಬ್ಬಂದಿ ಶಿವರಾಜು ಅವರ ಮೇಲೆ ಆರೋಪಿ ಪ್ರವೀಣ ದಾಳಿ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ರಮೇಶ್ ಅವರು ಗಾಳಿಯಲ್ಲಿ ಗುಂಡು (police firing) ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಬಳಿಕ ಪ್ರವೀಣನ ಕಾಲಿಗೆ ಗುಂಡು ಹಾರಿಸಿದ್ದಾರೆ.
ಪೊಲೀಸ್ ಸಿಬ್ಬಂದಿ ಶಿವರಾಜು ಮತ್ತು ಆರೋಪಿ ಪ್ರವೀಣನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಪೊಲೀಸ್ ಸಿಬ್ಬಂದಿ ಶಿವರಾಜು ಅವರನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆರೋಪಿ ಪ್ರವೀಣನನ್ನು ಮೆಗ್ಗಾನ್ ಆಸ್ಪತ್ರೆಯ ಜೈಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಆರೋಪಿ ಪ್ರವೀಣನ ವಿರುದ್ಧ ಕೊಲೆ ಯತ್ನ, ಮಾದಕ ವಸ್ತುಗಳ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ಪ್ರಕರಣಗಳು ದಾಖಲಾಗಿವೆ.
(police firing)
ಮೂರು ದಿನದ ಹಿಂದೆ ಕಾರಿಗೆ ಬಂಕಿ
ಕೊಲೆ ಯತ್ನ ಕೇಸ್ ಹಿಂಪಡೆಯುವಂತೆ ಬೆದರಿಕೆಯೊಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಆರೋಪಿಗಳು ಬೆಂಕಿ ಹಚ್ಚಿದ್ದಾರೆ. ಶಿವಮೊಗ್ಗದ ಜೈಲ್ ರಸ್ತೆಯಲ್ಲಿ ಶನಿವಾರ ಬೆಳಗಿನ ಜಾವ ನಡೆದಿತ್ತು. ವನಜಾಕ್ಷಿ ಎಂಬವವರ ಮಗಳಿಗೆ ಸೇರಿದ ಕಾರಿಗೆ ಬೆಂಕಿಗೆ ಆಹುತಿಯಾಗಿತ್ತು. ಕಾರಿನಲ್ಲಿ ಸುಮಾರು 30 ಸಾವಿರ ರೂ. ನಗದು ಹಣವಿತ್ತು. ಅದು ಕೂಡ ಸುಟ್ಟು ಹೋಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
(police firing)
ಕೇಸ್ ವಾಪಸ್ ಗೆ ಬೆದರಿಕೆ
ವನಜಾಕ್ಷಿ ಅವರು ಜೈಲ್ ರಸ್ತೆಯಲ್ಲಿ ಟೀ ಅಂಗಡಿ ನಡೆಸುತ್ತಿದ್ದಾರೆ. ಮೂರು ತಿಂಗಳ ಹಿಂದೆ ಅಂಗಡಿಗೆ ಬಂದಿದ್ದ ಪ್ರವೀಣ್, ಕಾರ್ತಿಕ್, ನಿತೇಶ್ ಮತ್ತು ಇತರರು ವಜನಾಕ್ಷಿ ಅವರ ಮೇಲೆ ದಾಳಿ ಮಾಡಿದ್ದರು. ಗಾಜಿನ ಲೋಟದಿಂದ ಹೊಡೆದು ಕೊಲೆಗೆ ಯತ್ನಿಸಿದ್ದರು ಎಂದು ಆರೋಪಿಸಿ ಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿಗಳು ಜೈಲಿಗೆ ಹೋಗಿದ್ದು, ಹೈಕೋರ್ಟ್ ನಲ್ಲಿ ಜಾಮೀನು ಪಡೆದು ಬಂದಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಎಚ್ಚರಿಕೆ
ಜೈಲಿನಿಂದ ಬಿಡುಗಡೆಯಾದ ಮೇಲೆ ಪ್ರವೀಣ, ವಿಶಾಲ್, ನಿತೇಶ್, ಸಚಿನ್, ವನಜಾಕ್ಷಿ ಅವರ ಮನೆ ಮುಂದೆ ಬೈಕಿನಲ್ಲಿ ಓಡಾಡುತ್ತ ಭಯಪಡಿಸಲು ಯತ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ BOSS IS WAITING FOR KILLING ಎಂದು ಫೋಟೊ ಪ್ರಕಟಿಸಿದ್ದರು ಎಂದ ವನಜಾಕ್ಷಿ ಅವರು ದೂರಿನಲ್ಲಿ ತಿಳಿಸಿದ್ದಾರೆ.
ನಡುರಾತ್ರಿ ಕರೆ ಮಾಡಿ ಬೆಂಕಿ ಇಟ್ಟರು
ವನಜಾಕ್ಷಿ ಅವರ ಮಗಳು ಊರಿಗೆ ಹೋಗಬೇಕಿದ್ದಿದ್ದರಿಂದ ಕಾರನ್ನು ಇಲ್ಲಿಯೇ ನಿಲ್ಲಿಸಿದ್ದರು. ಡಿ.17ರಂದು ಮಧ್ಯರಾತ್ರಿ 3 ಗಂಟೆಗೆ ವನಜಾಕ್ಷಿ ಅವರ ಮಗನಿಗೆ ಕರೆ ಮಾಡಿದ ಆರೋಪಿಗಳು, ಮನೆಯಿಂದ ಹೊರಗೆ ಬರುವಂತೆ ಬೆದರಿಕೆ ಒಡ್ಡಿದ್ದಾರೆ. ಆದರೆ ವನಜಾಕ್ಷಿ ಅವರ ಮಗ ಹೊರಗೆ ಹೋಗಲಿಲ್ಲ. ಕೊನೆಗೆ ಆರೋಪಿಗಳು ಕಲ್ಲಿನಿಂದ ಹೊಡೆದು ಕಾರಿನ ಗಾಜು ಜಖಂಗೊಳಿಸಿದ್ದಾರೆ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಕೆಲವೇ ನಿಮಿಷದಲ್ಲಿ ಕಾರು ಸುಟ್ಟು ಕರಕಲಾಗಿದೆ ಎಂದು ವನಜಾಕ್ಷಿ ಅವರು ದೂರಿನಲ್ಲಿ ಆಪಾದಿಸಿದ್ದಾರೆ.
ಇದನ್ನೂ ಓದಿ –ಶಿವಮೊಗ್ಗ ಜಿಲ್ಲೆಯಾದ್ಯಂತ 20 ಚೆಕ್ ಪೋಸ್ಟ್, ಪೊಲೀಸರಿಂದ ದಿಢೀರ್ ಕಾರ್ಯಾಚರಣೆ, 46 ಜನರ ವಿರುದ್ಧ ಕೇಸ್
ಕಾರು ಬೆಂಕಿಗೆ ಆಹುತಿಯಾಗಿರುವುದರಿಂದ 12 ಲಕ್ಷ ರೂ. ನಷ್ಟವಾಗಿದೆ. ಕಾರಿನಲ್ಲಿ 30 ಸಾವಿರ ರೂ. ನಗದು ಇತ್ತು. ಅದು ಕೂಡ ಸುಟ್ಟು ಹೊಗಿದೆ ಎಂದು ತಿಳಿಸಲಾಗಿದೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
![]()