BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡು ಹೊಡೆಯಲಾಗಿದೆ. ವೆಂಕಟೇಶ ನಗರದಲ್ಲಿ ಯುವಕನ ಕೊಲೆ ಪ್ರಕರಣ ಸಂಬಂಧ ಮಹಜರ್ ಗೆ ಕರೆದೊಯ್ದಾಗ ಘಟನೆ ಸಂಭವಿಸಿದೆ. (FIRING ON JABI)

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ವೆಂಕಟೇಶ ನಗರದಲ್ಲಿ ಮಂಗಳವಾರ ಬೆಳಗಿನ ಜಾವ ವಿಜಯ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ಜಬಿ (23), ದರ್ಶನ್ (21) ಮತ್ತು ಕಾರ್ತಿಕ್ ಅಲಿಯಾಸ್ ಕಟ್ಟೆ (21) ಬಂಧಿತರು.

(FIRING ON JABI)

ಮಹಜರ್ ಗೆ ಹೋದಾಗ ಹಲ್ಲೆ 

ವಿಜಯ್ ಕೊಲೆಗೆ ಬಳಕೆ ಮಾಡಿದ್ದ ಮಾರಕಾಸ್ತ್ರಗಳನ್ನು ಶಿವಮೊಗ್ಗ ಹರ್ಷ ಫರ್ನ್ ಹೊಟೇಲ್ ಸಮೀಪ ತುಂಗಾ ಚಾನಲ್ ಬಳಿ ಬಚ್ಚಿಟ್ಟಿದ್ದರು. ಇವುಗಳನ್ನು ವಶಕ್ಕೆ ಪಡೆದು, ಸ್ಥಳ ಮಹಜರ್ ಮಾಡಲು ಪ್ರಮುಖ ಆರೋಪಿ ಜಬಿಯನ್ನು ಕರೆದೊಯ್ಯಲಾಗಿತ್ತು. ಹುದುಗಿಸಿ ಇಟ್ಟ ಮಾರಕಾಸ್ತ್ರಗಳನ್ನು ತೆಗೆದ ಜಬಿ, ಜಯನಗರ ಠಾಣೆ ಸಿಬ್ಬಂದಿ ರೋಷನ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ಅದೃಷ್ಟವಶಾತ್ ರೋಷನ್ ತಪ್ಪಿಕೊಂಡಿದ್ದಾರೆ. ಆದರೆ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಈ ವೇಳೆ ಕುಂಸಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹರೀಶ್ ಪಟೇಲ್ ಅವರು ಆತ್ಮರಕ್ಷಣೆಗಾಗಿ ಜಬಿ ಕಾಲಿಗೆ ಗುಂಡು ಹಾರಿಸಿದ್ದಾರೆ.

(FIRING ON JABI)

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ರೋಷನ್ ಮತ್ತು ಗುಂಡೇಟಿನಿಂದ ಗಾಯಗೊಂಡಿರುವ ಜಬಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರಿಗು ಚಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ರೋಷನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡುವ ಸಾಧ್ಯತೆ ಇದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ವೆಂಕಟೇಶ ನಗರದಲ್ಲಿ ನಡೆದ ಯುವಕನ ಕೊಲೆಗೆ ಕಾರಣ ಬಿಚ್ಚಿಟ್ಟ ಪೊಲೀಸ್ ಇಲಾಖೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment