ಅಡಕೆ ಸಾಗಣೆಗೆ 6 ಗೈಡ್ ಲೈನ್ ಪ್ರಕಟಿಸಿದ ಶಿವಮೊಗ್ಗ ಪೊಲೀಸ್, ಏನದು? ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 NOVEMBER 2022

ಶಿವಮೊಗ್ಗ : ಸಾಗರ ಅಡಕೆ ಕಳ್ಳತನ ಪ್ರಕರಣದ ಬೆನ್ನಿಗೆ ಪೊಲೀಸ್ ಇಲಾಖೆ ಅಡಕೆ ರಕ್ಷಣೆ ಕುರಿತು ಮಹತ್ವದ ಸಭೆ ನಡೆಸಿದೆ. ಅಲ್ಲದೆ ಆರು ಮಾರ್ಗಸೂಚಿಯನ್ನು (Guideline for Adike) ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

Shimoga Nanjappa Hospital

ಶಿವಮೊಗ್ಗ ಎಪಿಎಂಸಿಯಲ್ಲಿ ಅಡಕೆ ವರ್ತಕರ ಸಂಘದ ಸಭಾಂಗಣದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವರ್ತಕರ ಜೊತೆ ಸಭೆ ನಡೆಸಿದರು. ಅಡಕೆ ಮೇಲೆ ಕಳ್ಳರ ಕಣ್ಣು ಬೀಳದಂತೆ ನಿಯಂತ್ರಿಸಲು ವಿವಿಧ ಕಠಿಣ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಆರು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಸಾಗರ ಅಡಕೆ ಕಳವು ಪ್ರಕರಣದ ಬೆನ್ನಿಗೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

(Guideline for Adike)

ಏನಿದು ಸಾಗರದ ಅಡಕೆ ಕಳವು ಕೇಸ್?

ಇತ್ತೀಚೆಗೆ, ಸಾಗರದ ಬಳಸಗೋಡು ಗ್ರಾಮದ ಮಧುಕರ್ ಎಂಬುವವರು ತಮ್ಮ ಗೋಡೋನ್ ನಿಂದ LIC-HOME-NEW-ADVT24,500 ಕೆ.ಜಿ ತೂಕದ 350 ಚೀಲ ಅಡಕೆಯನ್ನು ಗುಜರಾತ್ ರಾಜ್ಯದ ಅಹಮದಾಬಾದ್ ಗೆ ಕಳುಹಿಸಿದ್ದರು. ಅಡಕೆ ಹೊತ್ತು ಸಾಗಿದ್ದ ಲಾರಿ ನಾಪತ್ತೆಯಾಗಿತ್ತು. ಈ ಕುರಿತು ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 22 ದಿನ ತನಿಖೆ ನಡೆಸಿದ ಪೊಲೀಸರು, ಮದ್ಯಪ್ರದೇಶದಲ್ಲಿ ಮೂವರು ಆರೋಪಿಗಳನ್ನು ಲಾರಿ ಮತ್ತು ಅಡಕೆ ಸಹಿತ ವಶಕ್ಕೆ ಪಡೆದಿದ್ದರು.

ಮದ್ಯಪ್ರದೇಶದ ರಜಾಕ್ ಖಾನ್ ಅಲಿಯಾಸ್ ಸಲೀಂ ಖಾನ್ (65), ಥೇಜು ಸಿಂಗ್ (42), ಅನೀಸ್ ಅಬ್ಬಾಸಿ (55) ಬಂಧಿತರು. 1.17 ಕೋಟಿ ರೂ. ಮೊತ್ತದ ಕೆಂಪು ಅಡಕೆಯನ್ನು ವಶಕ್ಕೆ ಪಡೆಯಲಾಗಿತ್ತು. ಆರೋಪಿಗಳ ಬಂಧನದ ಬಳಿಕ ಅವರು ಅಂತಾರಾಜ್ಯ ಕಳ್ಳರು ಎಂಬುದು ಗೊತ್ತಾಗಿತ್ತು.

adike theft at sagara

(Guideline for Adike)

ಅಡಕೆ ಸಾಗಣೆ ಮೇಲೆ ನಿಗಾ

ಸಾಗರದಲ್ಲಿ ಕೋಟಿ ರೂ. ಮೌಲ್ಯದ ಅಡಕೆಯನ್ನು ವಶಕ್ಕೆ ಪಡೆದ ಬೆನ್ನಿಗೆ ಪೊಲೀಸ್ ಇಲಾಖೆ ಅಡಕೆ ಸಾಗಣೆ ಮೇಲೆ ನಿಗಾ ವಹಿಸಿದೆ. ಅಡಕೆ ವರ್ತಕರ ಜೊತೆ ಸಭೆ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು 8 ಮಾರ್ಗ ಸೂಚಿ ಪ್ರಕಟಿಸಿದ್ದಾರೆ.

ಮಾರ್ಗಸೂಚಿ 1 – ಅಡಕೆ ಮಂಡಿಗಳ ಮಾಲೀಕರು ಮುಂಜಾಗೃತಾ ಕ್ರಮವಾಗಿ ಮಂಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು.

https://chat.whatsapp.com/KChu2C1bGTM2v9HmZlfIkSಮಾರ್ಗಸೂಚಿ 2 – ಅಡಕೆ ಸಾಗಾಣೆ ಮಾಡುವ ಮುಂಚೆ ವಾಹನಗಳ ಚಾಲಕರು ಮತ್ತು ಸಹಾಯಕರುಗಳ ಪೂರ್ವಾಪರ ಪರಿಶೀಲಿಸಬೇಕು. ಅವರ ಮಾಹಿತಿ ಖಚಿತ ಪಡಿಸಿಕೊಂಡ ನಂತರವೇ ಸಾಗಾಟ ಮಾಡಬೇಕು.

ಮಾರ್ಗಸೂಚಿ 3 – ಮಂಡಿಗಳಲ್ಲಿ ಸಂಗ್ರಹಿಸಿರುವ ಮತ್ತು ಸಾಗಾಟ ಮಾಡುವ ಅಡಕೆಗೆ ವಿಮೆ ಮಾಡಿಸಬೇಕು.

ಮಾರ್ಗಸೂಚಿ 4 – ಅಡಕೆ ಸಾಗಾಟ ಮಾಡುವಾಗ ಟ್ರಾನ್ಸ್ ಪೋರ್ಟ್ ಏಜನ್ಸಿ ಮತ್ತು ಮಾಲೀಕರ ಪೂರ್ವಾಪರ ಪರಿಶೀಲಿಸಿಕೊಳ್ಳಬೇಕು.

ALSO READ – ಅಡಕೆ ಧಾರಣೆ | 29 ನವೆಂಬರ್ 2022 | ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

ಮಾರ್ಗಸೂಚಿ 5 – ಅಡಕೆ ಸಾಗಾಟ ಮಾಡುವ ವಾಹನಗಳಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಿಕೊಳ್ಳಬೇಕು. ಅಥವಾ ಜಿಪಿಎಸ್ ಅಳವಡಿಸಿರುವ ವಾಹನಗಳಲ್ಲಿಯೇ ಅಡಕೆ ಸಾಗಾಟ ಮಾಡಬೇಕು.

Meeting with adike market apmc

ALSO READ – ಎಲೆ ಚುಕ್ಕೆ, ತೀರ್ಥಹಳ್ಳಿಯ ತೋಟಕ್ಕೆ ಸಿಎಂ ಭೇಟಿ, ಇಲ್ಲಿದೆ ಬೊಮ್ಮಾಯಿ ಹೇಳಿದ 3 ಪ್ರಮುಖಾಂಶ

ಮಾರ್ಗಸೂಚಿ 6 – ಯಾವುದೇ ಸಂಶಯ ಕಂಡುಬಂದಲ್ಲಿ ಅಥವಾ ತುರ್ತು ಸಹಾಯಕ್ಕಾಗಿ ಹತ್ತಿರದ ಪೊಲೀಸ್ ಠಾಣೆ, ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ – 9480803300 ಗೆ ಕರೆ ಮಾಡಬಹುದು. ತುರ್ತು ಸಹಾಯವಾಣಿ 112ಗೆ ಕರೆ ಮಾಡಿ ಮಾಹಿತಿ ನೀಡಬಹುದು.

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 30, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment