ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಡುರಾತ್ರಿ ಮಾರಕಾಸ್ತ್ರ ಹಿಡಿದು ಆಗಂತುಕರು ಓಡಾಡಿದ್ದರಿಂದ ಒಡ್ಡಿನಕೊಪ್ಪ ಸಮೀಪದ ಪುಟ್ಟಪ್ಪ ಕ್ಯಾಂಪ್ನ ನಿವಾಸಿಗಳು ಆತಂಕಕ್ಕೀಡಾಗಿದ್ದರು. ಈ ಮಧ್ಯೆ ಪೊಲೀಸ್ ಇಲಾಖೆ ಸ್ಥಳೀಯರಿಗೆ ಅಭಯ ನೀಡಿದ್ದು, ಬಡಾವಣೆಯಲ್ಲಿ ಶಸ್ತ್ರಸಜ್ಜಿತವಾಗಿ ಗಸ್ತು (Patrol) ಆರಂಭಿಸಿದೆ.
ಒಡ್ಡಿನಕೊಪ್ಪ ಸಮೀಪದ ಎನ್.ಆರ್.ಪುರ ರಸ್ತೆಗೆ ಹೊಂದಿಕೊಂಡಿರುವ ಪುಟ್ಟಪ್ಪ ಕ್ಯಾಂಪ್ನಲ್ಲಿ ಭಾನುವಾರ ರಾತ್ರಿ 1 ಗಂಟೆಗೆ ಆರು ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಓಡಾಡಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಹತ್ತು ಮನೆ, 20 ಕುಟುಂಬ

ಪುಟ್ಟಪ್ಪ ಕ್ಯಾಂಪ್ನಲ್ಲಿ ಕೆಲವೇ ವರ್ಷದ ಹಿಂದೆ ಬಡಾವಣೆ ನಿರ್ಮಾಣವಾಗಿದೆ. ಸದ್ಯ ಇಲ್ಲಿ 10 ಮನೆಗಳಿವೆ. ಸುಮಾರು 20 ಕುಟುಂಬಗಳು ವಾಸಿಸುತ್ತಿವೆ. ಅಧಿಕಾರಿಗಳು, ಉಪನ್ಯಾಸಕರು, ಉದ್ಯಮಿಗಳು ಇಲ್ಲಿ ವಾಸಿಸುತ್ತಿದ್ದಾರೆ. ಆದ್ದರಿಂದ ಬಡಾವಣೆಯಲ್ಲಿ ಜನ ಸಂಚಾರ ಕಡಿಮೆ.
ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ ಭೇಟಿ

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರ್ಯಪ್ಪ ಪುಟ್ಟಪ್ಪ ಕ್ಯಾಂಪ್ ಬಡಾವಣೆಗೆ ಭೇಟಿ ನೀಡಿದ್ದರು. ಸಿಸಿಟಿವಿ ದೃಶ್ಯ ಪರಿಶೀಲಿಸಿ, ಸ್ಥಳೀಯರಿಂದ ಮಾಹಿತಿ ಪಡೆದರು. ಅಲ್ಲದೆ ತುರ್ತು ಸಂದರ್ಭ ಪೊಲೀಸ್ ಇಲಾಖೆಯ ಸಹಾಯವಾಣಿ 112ಗೆ ಕರೆ ಮಾಡುವಂತೆ ತಿಳಿಸಿದರು. ಡಿವೈಎಸ್ಪಿ ಬಾಬು ಆಂಜನಪ್ಪ, ತುಂಗಾ ನಗರ ಠಾಣೆ ಇನ್ಸ್ಪೆಕ್ಟರ್ ಕೆ.ಟಿ.ಗುರುರಾಜ್ ಭೇಟಿ ನೀಡಿ ಪರಿಶೀಲಿಸಿದರು.
ಶಸ್ತ್ರಾಸ್ತ್ರ ಸಹಿತ ಪೊಲೀಸರ ಗಸ್ತು

ಜನರಲ್ಲಿ ಭರವಸೆ ಮೂಡಿಸಲು ಪೊಲೀಸರು ಶಸ್ತ್ರಾಸ್ತ್ರ ಸಹಿತ ಗಸ್ತು ನಡೆಸಿದರು. ಕಳೆದ ರಾತ್ರಿ ಕಾಲ್ನಡಿಗೆಯಲ್ಲಿ ಒಡ್ಡಿನಕೊಪ್ಪ ಭಾಗದ ಹಲವಡೆ ತುಂಗಾ ನಗರ ಠಾಣೆ ಪೊಲೀಸರು ಗಸ್ತು ನಡೆಸಿದರು. ರಾತ್ರಿ ಪೂರ್ತಿ ಪೊಲೀಸರು ಗಸ್ತು ಮಾಡಿದರು.

ಸದ್ಯ ಪುಟ್ಟಪ್ಪ ಕ್ಯಾಂಪ್ನಲ್ಲಿ ಓಡಾಡಿದ ದುಷ್ಕರ್ಮಿಗಳಿಗೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಸ್ತ್ರಾಸ್ತ್ರ ಸಹಿತ ಪೊಲೀಸರ ಗಸ್ತು ಜನರು ನಿಟ್ಟುಸಿರು ಬಿಡುವಂತೆ ಮಾಡಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















