ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ಅಪಘಾತಗಳ ಪ್ರಮಾಣ ಕಡಿತಗೊಳಿಸಲು ಪೊಲೀಸ್ ಇಲಾಖೆ ವಿನೂತನ ಪ್ರಯೋಗ ಆರಂಭಿಸಿದೆ. ಹೆಚ್ಚು ಅಪಘಾತ ಸಂಭವಿಸುವ ವಲಯಗಳ ಚಾರ್ಟ್ ಸಿದ್ಧಪಡಿಸಲಾಗಿದೆ.
ಪ್ರೆಸ್ ಟ್ರಸ್ಟ್’ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಕ್ಷಣಾಧಿಕಾರಿ ಹೇಳಿದ್ದೇನು?
♦ ‘ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಶೇ.20ರಷ್ಟು ಅಪಘಾತ ಪ್ರಕರಣಗಳು ಕಡಿಮೆಯಾಗಿವೆ. ಅಪಘಾತ ಪ್ರಮಾಣ ಇನ್ನಷ್ಟು ತಗ್ಗಬೇಕಿದೆ. ಇದಕ್ಕಾಗಿ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ.’
♦ ‘ಒಂದು ಅಪಘಾತ ಹಲವು ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ. ಪ್ರತ್ಯಕ್ಷ, ಪರೋಕ್ಷವಾಗಿ ಸುಮಾರು 30 ಜನಕ್ಕೆ ತೊಂದರೆ ಉಂಟಾಗುತ್ತದೆ.’
♦ ‘ಜಿಲ್ಲೆಯಾದ್ಯಂತ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ವಲಯಗಳನ್ನು ಗುರುತಿಸಲಾಗುತ್ತಿದೆ. ಯಾವೆಲ್ಲ ಜಾಗದಲ್ಲಿ ನಿರಂತರ ಅಪಘಾತ ಸಂಭವಿಸುತ್ತಿವೆ ಅನ್ನುವ ಚಾರ್ಟ್ ಸಿದ್ಧಪಡಿಸಲಾಗುತ್ತಿದೆ.’
♦ ‘ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ. ಗುತ್ತಿಗೆದಾರರು, ಪೊಲೀಸ್ ಸಿಬ್ಬಂದಿ ಸೇರಿದಂತೆ ಪ್ರಮುಖರ ಜೊತೆ ಸಭೆ ನಡೆಸಲಾಗುತ್ತದೆ. ಅಪಘಾತ ತಡೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಇವುಗಳಿಂದ ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಗ್ಗಲಿದೆ.’
ಇದನ್ನೂ ಓದಿ | ಶಿವಮೊಗ್ಗದಲ್ಲಿ ಬದಲಾಯ್ತು ಗಾಂಜಾ ಮಾರಾಟ ಕ್ರಮ, ಈಗ ಹೇಗೆ ನಡೆಯುತ್ತಿದೆ ದಂಧೆ?
ಇದನ್ನೂ ಓದಿ | ಗಾಜನೂರು ಸುತ್ತಮುತ್ತ ಪಾರ್ಟಿ ಮಾಡುವವರಿಗೆ ಕಾದಿದೆ ಶಾಕ್, ಖಡಕ್ ಕಾರ್ಯಾಚರಣೆಗೆ ರೆಡಿಯಾಗ್ತಿದೆ ಖಾಕಿ ಟೀಮ್
ಇದನ್ನೂ ಓದಿ | ‘ಜನರೊಂದಿಗೆ ಹೇಗೆ ವರ್ತಿಸಬೇಕು ಅನ್ನುವ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ’
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200