| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 24 OCTOBER 2023
SHIMOGA : ಓತಿಘಟ್ಟದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ (Raid) ನಡೆಸಿ ಬೀಡಿ, ಮೊಬೈಲ್, ಬೆಂಕಿ ಪೊಟ್ಟಣ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರ ಸೂಚನೆ ಮೇರೆಗೆ ಡಿವೈಎಸ್ಪಿ, ವಿವಿಧ ಠಾಣೆಗಳ ಇನ್ಸ್ಪೆಕ್ಟರ್ಗಳು, ಪಿಎಸ್ಐಗಳು, ಸಿಬ್ಬಂದಿ, ಡಿಎಆರ್ ಸಿಬ್ಬಂದಿ ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದರು.
ಗಾರ್ಡನ್ನಲ್ಲಿ ಸಿಕ್ತು ಮಂಗಳೂರು ಬೀಡಿ, ಮೊಬೈಲ್
ಜೈಲಿನ ಬ್ಲಾಕ್ಗಳಲ್ಲಿ ಎಲ್ಲ ಸೆಲ್ಗಳಲ್ಲಿಯು ತಪಾಸಣೆ ನಡೆಸಲಾಯಿತು. ತುಂಗಾ ಬ್ಲಾಕ್ನ ಕೊಠಡಿ ಸಂಖ್ಯೆ 12ರ ಮುಂಭಾಗ ಕೈತೋಟದಲ್ಲಿ ಗಿಡಗಳ ಮಧ್ಯೆ ತಪಾಸಣೆ ವೇಳೆ ಗುಂಡಿ ತೆಗೆದು ಮುಚ್ಚಿರುವುದು ಕಂಡು ಬಂದಿದೆ. ಮಣ್ಣು ಅಗೆದು ಪರಿಶೀಲಿಸಿದಾಗ ಪ್ಲಾಸ್ಟಿಕ್ ಕವರ್ನಲ್ಲಿ ಮುಚ್ಚಿಟ್ಟಿದ್ದ ಮೊಬೈಲ್ ಪತ್ತೆಯಾಗಿದೆ. ಅದರಲ್ಲಿ ಯಾವುದೆ ಸಿಮ್ ಇರಲಿಲ್ಲ.
ಇದನ್ನೂ ಓದಿ – INSTAದಲ್ಲಿ ಯುವತಿ ನಕಲಿ ಖಾತೆ, ಪ್ರಿಯಕರನ ಮೇಲೆ ಶಂಕೆ, FACEBOOKನಲ್ಲಿ ಗೃಹಿಣಿಯ ತೇಜೋವಧೆ
ಇನ್ನು, ಸೆಲ್ ನಂಬರ್ 36ರ ಸಮೀಪ ಗಿಡಗಳ ಮಧ್ಯೆ ಮಂಗಳೂರು ಸ್ಪೆಷಲ್ ಬೀಡಿಗಳು, ಬೆಂಕಿ ಪೊಟ್ಟಣ, ಯುಎಸ್ಬಿ ಚಾರ್ಜರ್ ಕೇಬಲ್, ಚಿಕ್ಕ ಬ್ಲೇಡ್, ಚಿಲುಮೆಗಳು, ಕತ್ತರಿ ಪತ್ತೆಯಾಗಿದೆ. ಇವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದು, ತನಿಖೆ ನಡೆಯುತ್ತಿದೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()