ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ, ಮೂಲೆ ಮೂಲೆ ಶೋಧಿಸಿದ ಖಾಕಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA , 28 AUGUST 2024 : ಸೋಗಾನೆಯಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದ (Jail) ಮೇಲೆ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದರು. ಇದೇ ಮೊದಲ ಬಾರಿ ಬೆಳಗಿನ ಜಾವ ದಾಳಿ ನಡೆಸಲಾಗಿದೆ. ಪೊಲೀಸರು ಕಾರಾಗೃಹದ ಮೂಲೆ ಮೂಲೆಯನ್ನು ಶೋಧಿಸಿದರು.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್‌ ಇಲಾಖೆ, ನೂರು ಪೊಲೀಸ್‌ ಸಿಬ್ಬಂದಿಯೊಂದಿಗೆ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಯಿತು. ವಿವಿಧೆಡೆ ಪರಿಶೀಲನೆ ನಡೆಸಲಾಯಿತು ಎಂದು ತಿಳಿಸಲಾಗಿದೆ.

» ಮೂಲೆ ಮೂಲೆಯಲ್ಲಿ ಶೋಧ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾಥಿತ್ಯ ಆರೋಪ, ವಿಡಿಯೋ ಕಾಲ್‌ನಲ್ಲಿ ಮಾತನಾಡಿದ ಪ್ರಕರಣದ ಬೆನ್ನಿಗೆ ಶಿವಮೊಗ್ಗ ಜೈಲಿನ ಮೇಲೆ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ದಿಢೀರ್‌ ದಾಳಿ ನಡೆಸಲಾಯಿತು. ಸುಮಾರು ನಾಲ್ಕು ಗಂಟೆಗು ಹೆಚ್ಚು ಹೊತ್ತು ಮೂಲೆ ಮೂಲೆ ಶೋಧ ಕಾರ್ಯ ನಡೆಸಲಾಯಿತು.

police-raid-on-central-prision-in-Shimoga

ಯಾರೆಲ್ಲ ದಾಳಿ ನಡೆಸಿದ್ದರು?

ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್‌ ಕುಮಾರ್‌ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿವೈಎಸ್‌ಪಿಗಳಾದ ಕೃಷ್ಣಮೂರ್ತಿ, ಇನ್ಸ್‌ಪೆಕ್ಟರ್‌ಗಳಾದ ರವಿ ಪಾಟೀಲ್‌, ದೀಪಕ್‌, ಸತ್ಯನಾರಾಯಣ, ಪ್ರಶಾಂತ್‌, ಇಬ್ಬರು ಪಿಎಸ್‌ಐಗಳು, 100 ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

shimoga jail

700ಕ್ಕೂ ಹೆಚ್ಚು ಕೈದಿಗಳು

ಶಿವಮೊಗ್ಗದ ಕೇಂದ್ರ ಕಾರಾಗೃಹವು ಕೊರಿಯ ಮಾದರಿಯ ಜೈಲುಗಳಂತೆ ನಿರ್ಮಿಸಲಾಗಿದೆ. 270 ಕೊಠಡಿಗಳು ಇಲ್ಲಿವೆ. ಇವತ್ತಿಗೆ ಜೈಲಿನಲ್ಲಿ 778 ಕೈದಿಗಳು ಇದ್ದಾರೆ. ಪ್ರತಿ ಕೊಠಡಿಯಲ್ಲಿ ಟಿವಿ, ಸುಸಜ್ಜಿತ ಗಾಳಿ, ಬೆಳಕು ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಕೈಗಾರಿಕ ಭದ್ರತಾ ಪಡೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

shimoga jail

ಇದನ್ನೂ ಓದಿ ⇒ ಅರಣ್ಯ ಒತ್ತುವರಿ ತೆರವು ವಿಚಾರ, ಹರಿಪ್ರಸಾದ್‌ ಫೋನ್‌ ಕರೆ ಬೆನ್ನಿಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಮಿನಿಸ್ಟರ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment