| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIMOGA , 28 AUGUST 2024 : ಸೋಗಾನೆಯಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹದ (Jail) ಮೇಲೆ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದರು. ಇದೇ ಮೊದಲ ಬಾರಿ ಬೆಳಗಿನ ಜಾವ ದಾಳಿ ನಡೆಸಲಾಗಿದೆ. ಪೊಲೀಸರು ಕಾರಾಗೃಹದ ಮೂಲೆ ಮೂಲೆಯನ್ನು ಶೋಧಿಸಿದರು.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ನೂರು ಪೊಲೀಸ್ ಸಿಬ್ಬಂದಿಯೊಂದಿಗೆ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಲಾಯಿತು. ವಿವಿಧೆಡೆ ಪರಿಶೀಲನೆ ನಡೆಸಲಾಯಿತು ಎಂದು ತಿಳಿಸಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾಥಿತ್ಯ ಆರೋಪ, ವಿಡಿಯೋ ಕಾಲ್ನಲ್ಲಿ ಮಾತನಾಡಿದ ಪ್ರಕರಣದ ಬೆನ್ನಿಗೆ ಶಿವಮೊಗ್ಗ ಜೈಲಿನ ಮೇಲೆ ದಾಳಿ ನಡೆಸಲಾಗಿದೆ. ಬೆಳಗಿನ ಜಾವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಯಿತು. ಸುಮಾರು ನಾಲ್ಕು ಗಂಟೆಗು ಹೆಚ್ಚು ಹೊತ್ತು ಮೂಲೆ ಮೂಲೆ ಶೋಧ ಕಾರ್ಯ ನಡೆಸಲಾಯಿತು.» ಮೂಲೆ ಮೂಲೆಯಲ್ಲಿ ಶೋಧ
![]()
ಯಾರೆಲ್ಲ ದಾಳಿ ನಡೆಸಿದ್ದರು?
ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಎ.ಜಿ.ಕಾರ್ಯಪ್ಪ, ಡಿವೈಎಸ್ಪಿಗಳಾದ ಕೃಷ್ಣಮೂರ್ತಿ, ಇನ್ಸ್ಪೆಕ್ಟರ್ಗಳಾದ ರವಿ ಪಾಟೀಲ್, ದೀಪಕ್, ಸತ್ಯನಾರಾಯಣ, ಪ್ರಶಾಂತ್, ಇಬ್ಬರು ಪಿಎಸ್ಐಗಳು, 100 ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

700ಕ್ಕೂ ಹೆಚ್ಚು ಕೈದಿಗಳು
ಶಿವಮೊಗ್ಗದ ಕೇಂದ್ರ ಕಾರಾಗೃಹವು ಕೊರಿಯ ಮಾದರಿಯ ಜೈಲುಗಳಂತೆ ನಿರ್ಮಿಸಲಾಗಿದೆ. 270 ಕೊಠಡಿಗಳು ಇಲ್ಲಿವೆ. ಇವತ್ತಿಗೆ ಜೈಲಿನಲ್ಲಿ 778 ಕೈದಿಗಳು ಇದ್ದಾರೆ. ಪ್ರತಿ ಕೊಠಡಿಯಲ್ಲಿ ಟಿವಿ, ಸುಸಜ್ಜಿತ ಗಾಳಿ, ಬೆಳಕು ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಕೈಗಾರಿಕ ಭದ್ರತಾ ಪಡೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಇದನ್ನೂ ಓದಿ ⇒ ಅರಣ್ಯ ಒತ್ತುವರಿ ತೆರವು ವಿಚಾರ, ಹರಿಪ್ರಸಾದ್ ಫೋನ್ ಕರೆ ಬೆನ್ನಿಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಮಿನಿಸ್ಟರ್
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()