ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರ ನೇತೃತ್ವದಲ್ಲಿ ರೂಟ್ ಮಾರ್ಚ್ ನಡೆಯಿತು.
ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿ, ಡಿಎಆರ್ ತುಕಡಿ, ಕೆ.ಎಸ್.ಆರ್.ಪಿ ತುಕಡಿ ರೂಟ್ ಮಾರ್ಚ್’ನಲ್ಲಿ ಪಾಲ್ಗೊಂಡಿದ್ದವು.
ಶಿವಮೊಗ್ಗ ನಗರದ ಮಿಳ್ಳಘಟ್ಟ ಕ್ರಾಸ್ ನಿಂದ ರೂಟ್ ಮಾರ್ಚ್ ಪ್ರಾರಂಭವಾಯಿತು. ಅಣ್ಣಾ ನಗರ, ಟಿಪ್ಪು ನಗರ ಚಾನೆಲ್ ಏರಿಯಾ, ಪದ್ಮಾ ಟಾಕೀಸ್, ಜೆ.ಪಿ ನಗರದಿಂದ ನೇತಾಜಿ ಸರ್ಕಲ್, ಆಯನೂರು ಗೇಟ್ ಮುಖಾಂತರ ಬಿ.ಹೆಚ್.ರಸ್ತೆಯಿಂದ ಅಮೀರ್ ಅಹಮ್ಮದ್ ಸರ್ಕಲ್ ಮುಖಾಂತರ ಗಾಂಧಿ ಬಜಾರ್, ಎಂಕೆಕೆ ರಸ್ತೆ, ಲಷ್ಕರ್ ಮೊಹಲ್ಲಾ ನಂತರ ಬಿ. ಹೆಚ್ ರಸ್ತೆ ಮೂಲಕ ಡಿಎಆರ್ ಪೊಲೀಸ್ ಮೈದಾನದವರೆಗೆ ರೂಟ್ ಮಾರ್ಚ್ ನಡೆಯಿತು.
ಇದನ್ನೂ ಓದಿ | ಹಿಜಾಬ್, ಕೇಸರಿ ಶಾಲು ವಿವಾದ, ಮಂಗಳವಾರ ಜಿಲ್ಲೆಯ ಯಾವ್ಯಾವ ಕಾಲೇಜಿನಲ್ಲಿ ಏನೇನಾಯ್ತು?
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






