ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಪ್ ಗೆಲ್ಲಲಿ ಎಂದು ಶಿವಮೊಗ್ಗದಲ್ಲಿ ಪೂಜೆ, ರಕ್ತದಾನ, ಹಾಲಿನ ಅಭಿಷೇಕ ನಡೆಯುತ್ತಿದೆ. ಇಂದು ಪಂದ್ಯಾವಳಿ ವೀಕ್ಷಣೆಗೆ ವಿವಿಧೆಡೆ ಬೃಹತ್ ಪರದೆಗಳನ್ನು ಹಾಕುವ ಸಾಧ್ಯತೆ ಇದೆ.
ಹೊಳೆಬೆನವಳ್ಳಿಯಲ್ಲಿ ರಕ್ತದಾನ ಶಿಬಿರ
ಆರ್ಸಿಬಿ ಗೆಲುವಿಗಾಗಿ ಪ್ರಾರ್ಥಿಸಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಕಾಲೇಜು, ಮೆಗ್ಗಾನ್ ಆಸ್ಪತ್ರೆ ಮತ್ತು ಹೊಳೆಬೆನವಳ್ಳಿ ಯುವಕರು ಸಹಯೋಗದೊಂದಿಗೆ ಶಿಬಿರ ಆಯೋಜಿಸಲಾಗಿದೆ. ಬೆಳಗ್ಗೆಯಿಂದ 25 ಯುನಿಟ್ಗಿಂತಲು ಹೆಚ್ಚಿನ ಪ್ರಮಾಣದ ರಕ್ತ ಸಂಗ್ರಹಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್ಚೇಂಜ್ ಮೇಳ, ಯಾವಾಗ? ಎಲ್ಲಿದೆ?
ಕಟೌಟ್ಗೆ ಹಾಲಿನ ಅಭಿಷೇಕ
ಶಿವಮೊಗ್ಗದ ಕುಂಬಾಗುಂಡಿ ಯುವಕರ ತಂಡದ ವತಿಯಿಂದ ಆರ್ಸಿಬಿ ಗೆಲುವಿಗಾಗಿ ಹಾರೈಸಿ ಕಟೌಟ್ಗೆ ಹಾಲಿನ ಅಭಿಷೇಕ ಮಾಡಲಾಯಿತು. ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ನಟರಾದ ದರ್ಶನ್ ಮತ್ತು ಸುದೀಪ್ ಇರುವ ಕಟೌಟ್ಗೆ ಹಾಲಿನ ಅಭಿಷೇಕ ಮಾಡಿದ್ದಾರೆ.

ಇದನ್ನೂ ಓದಿ » ಕಾರು, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಕನ್ನಡದ ಧ್ವಜ ಹಿಡಿದು ಡಾನ್ಸ್
ಆರ್ಸಿಬಿ ತಂಡ ಕಪ್ ಗೆಲ್ಲಲಿ ಎಂದು ಹಾರೈಸಿ ಶಿವಮೊಗ್ಗದಲ್ಲಿ ಚಿಣ್ಣರು ಕನ್ನಡದ ಧ್ವಜ ಹಿಡಿದು ನೃತ್ಯ ಮಾಡಿದ್ದಾರೆ. ಸ್ಟೈಲ್ ಡಾನ್ಸ್ ಗ್ರೂಪ್ನ ಮಕ್ಕಳು ಆರ್ಸಿಬಿ ಪರವಾಗಿ ಘೋಷಣೆ ಕೂಗುತ್ತ, ನಾಡ ಧ್ವಜ ಹಿಡಿದು ಹುರಿದುಂಬಿಸಿದರು.


ಶಿವಮೊಗ್ಗದಲ್ಲಿ ವಿಶೇಷ ಪೂಜೆ
ಆರ್ಸಿಬಿ ತಂಡ ಜಯಶಾಲಿಯಾಗಲಿ ಎಂದು ಪ್ರಾರ್ಥಿಸಿ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಷ್ಟ್ರಭಕ್ತರ ಬಳಗದ ವತಿಯಿಂದ ಗಣಪತಿ ಪೂಜೆ ಸಲ್ಲಿಸಿ, ಪ್ರಾರ್ಥಿಸಲಾಯಿತು. ನಾವೆಲ್ಲಾ ಹೇಳೋದು ಒಂದೇ ಈ ಸಲ ಕಪ್ ನಮ್ದೆ ಎಂದು ರಾಷ್ಟ್ರಭಕ್ತರ ಬಳಗದ ಸದಸ್ಯರು ಘೋಷಣೆ ಕೂಗಿದರು.


ವಿವಿಧೆಡೆ ಬೃಹತ್ ಪರದೆ
ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಫೈನಲ್ ಪಂದ್ಯ ವೀಕ್ಷಣೆಗೆ ಶಿವಮೊಗ್ಗ ನಗರದ ವಿವಿಧೆಡೆ ಬೃಹತ್ ಪರದೆಗಳನ್ನು ಅಳವಡಿಸಲು ಯೋಜಿಸಲಾಗಿದೆ. ಇನ್ನು, ನಗರದ ಪ್ರಮುಖ ಕ್ಲಬ್ಗಳು, ಹೊಟೇಲ್, ಬಾರ್ಗಳಲ್ಲು ಕೂಡ ಪಂದ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.
ಮತ್ತೊಂದೆಡೆ ಹೊಟೇಲ್, ಚಾಟ್ಸ್ ಸ್ಟಾಲ್ಗಳಲ್ಲಿ ಆರ್ಸಿಬಿ ಗೆದ್ದರೆ ಆಫರ್ಗಳನ್ನು ನೀಡಲು ಯೋಜಿಸಲಾಗಿದೆ.

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






