ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JUNE 2024
SHIMOGA : ಚರಂಡಿಗೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿರುವುದು ಮತ್ತು ಗುಂಡಿಗಳನ್ನು (Pot Hole) ಮುಚ್ಚಲು ಅಧಿಕಾರಿಗಳು ಆಸಕ್ತಿ ತೋರದ ಹಿನ್ನೆಲೆ, ಖಾಸಗಿ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಕೆರೆಯಂತಹ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ವಾಹನ ಸಂಚಾರ ಮತ್ತು ಪ್ರಯಾಣಿಕರ ಓಡಾಟಕ್ಕೆ ಸಮಸ್ಯೆ ಉಂಟಾಗಿದೆ.
ಖಾಸಗಿ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ದೊಡ್ಡ ಗುಂಡಿಗಳಾಗಿವೆ. ತಿಂಗಳುಗಳೆ ಕಳೆದರೂ ಈ ಗುಂಡಿಗಳನ್ನು ಮುಚ್ಚುವ ಪ್ರಯತ್ನವಾಗಿಲ್ಲ. ನಗರದಲ್ಲಿ ಮಳೆ ಆಗುತ್ತಿರುವುದರಿಂದ ಈ ಗುಂಡಿಗಳಲ್ಲಿ ನೀರು ನಿಂತು ಸಣ್ಣ ಕೆರೆಯಂತಾಗಿದೆ.
ಗುಂಡಿಗಳು ಇರುವುದರಿಂದ ಬಸ್ಸುಗಳು ನಿಧಾನವಾಗಿ ಚಲಿಸುತ್ತವೆ. ಅಶೋಕ ಸರ್ಕಲ್ನಲ್ಲಿ ವಾಹನ ದಟ್ಟಣೆ ಹೆಚ್ಚಿರುವುದರಿಂದ ದಿಢೀರ್ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇನ್ನು, ಪ್ರಯಾಣಿಕರು ಮಳೆ ನೀರು ನಿಂತ ಗುಂಡಿ ದಾಟಿ ಬಸ್ ನಿಲ್ದಾಣದೊಳಗೆ ಹೋಗಲು ಕಷ್ಟಪಡಬೇಕಾಗಿದೆ.

ಗುಂಡಿಗಳಿಂದ ಆಗುತ್ತಿರುವ ಸಮಸ್ಯೆ ಕುರಿತು ಖಾಸಗಿ ಬಸ್ಗಳ ಸಿಬ್ಬಂದಿ ಮತ್ತು ಸಂಚಾರ ಪೊಲೀಸರು ಮಹಾನಗರ ಪಾಲಿಕೆಗೆ ಮಾಹಿತಿ ನೀಡಿದ್ದರು. ಆದರೆ ಈ ತನಕ ಪರಿಹಾರ ಕಂಡಿಲ್ಲ. ಇತ್ತ ಸಂಚಾರ ಪೊಲೀಸರೆ ಮಣ್ಣು, ಕಲ್ಲು ತರಿಸಿ ಗುಂಡಿ ಮಚ್ಚಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಬಸ್ಸುಗಳು ನಿರಂತರವಾಗಿ ಓಡಾಡುವುದರಿಂದ ಮಣ್ಣು, ಕಲ್ಲು ಇಲ್ಲಿ ನಿಲ್ಲುವುದಿಲ್ಲ ಅನ್ನುತ್ತಾರೆ ಬಸ್ ಚಾಲಕರು. ಹಾಗಾಗಿ ನಿಲ್ದಾಣದ ಮುಂದಿನ ಗುಂಡಿಗಳನ್ನು ಶಾಶ್ವತವಾಗಿ ಮುಚ್ಚಬೇಕಿದೆ. ಇಲ್ಲವಾದಲ್ಲಿ ಮಳೆ ಹೆಚ್ಚಿದಂತೆ ಸಮಸ್ಯೆ ಹೆಚ್ಚಾಗಲಿದೆ.
ಇದನ್ನೂ ಓದಿ – ‘ಶಿವಮೊಗ್ಗದಿಂದ ಮೊದಲು ಈ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ’, ಸರ್ಕಾರಕ್ಕೆ ಒತ್ತಾಯ, ಕಾರಣವೇನು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















