ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಶಿವಮೊಗ್ಗದ ತುಂಗಾ ನದಿ ಹೊಸ ಸೇತುವೆ ಮೇಲಿನ ಗುಂಡಿಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಸೇತುವೆ ಮೇಲಿನ ಗುಂಡಿಗಳಿಗೆ ತೇಪೆ ಹಾಕಲಾಗಿದೆ. ಸದ್ಯ ವಾಹನ ಸವಾರರು ನಿರ್ಭೀತಿಯಿಂದ ಸಂಚರಿಸಬಹುದಾಗಿದೆ.
ತುಂಗಾ ನದಿ ಹೊಸ ಸೇತುವೆ ಮೇಲೆ ದೊಡ್ಡ ಗಾತ್ರದ ಗುಂಡಿಗಳಿದ್ದವು. ಇದು ವಾಹನ ಸವಾರರಿಗೆ ತೀವ್ರ ಸಂಕಷ್ಟ ತಂದೊಡ್ಡಿತ್ತು. ಗುಂಡಿಗಳಿಂದಾಗಿಯೇ ತುಂಗಾ ನದಿ ಹೊಸ ಸೇತುವೆ ಮೇಲೆ ಅಪಘಾತ ಸಂಭವಿಸುತ್ತಿತ್ತು.
ಶಿವಮೊಗ್ಗ ಲೈವ್’ನಲ್ಲಿ ವರದಿ ಪ್ರಕಟ
ತುಂಗಾ ನದಿ ಹೊಸ ಸೇತುವೆ ಮೇಲಿನ ದೊಡ್ಡ ಗುಂಡಿಗಳ ಕುರಿತು ಶಿವಮೊಗ್ಗ ಲೈವ್.ಕಾಂ ವರದಿಗಳನ್ನು ಪ್ರಕಟಿಸಿತ್ತು. ಈ ವರದಿ ಬೆನ್ನಿಗೆ ಅಧಿಕಾರಿಗಳು ಗುಂಡಿ ಮುಚ್ಚುವ ಕುರಿತು ತಿರ್ಮಾನ ಕೈಗೊಂಡಿದ್ದರು. ಶಿವಮೊಗ್ಗ ಲೈವ್’ನಲ್ಲಿ ಪ್ರಕಟವಾದ ವರದಿ ಇಲ್ಲಿದೆ » ತುಂಗಾ ನದಿ ಸೇತುವೆ ಮೇಲೆ ಇನ್ನೆಷ್ಟು ಜನರ ಬಲಿಗಾಗಿ ಕಾಯುತ್ತಿದ್ದಾರೆ ಅಧಿಕಾರಿಗಳು? | ದೂರು ದುಮ್ಮಾನ
ಸಂಸದರ ಭೇಟಿ ಮೊದಲು ಗುಂಡಿ ಬಂದ್
ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ವಿವಿಧ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಪರಿಶೀಲನೆ ನಡೆಸಿದರು. ವಿದ್ಯಾನಗರದಲ್ಲಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನೂ ಪರಿಶೀಲನೆ ನಡೆಸಿದರು. ಈ ಸಂದರ್ಭ ಸಂಸದರು ಹೊಸ ಸೇತುವೆ ಮೇಲೆ ಸಂಚರಿಸುವ ಸಾದ್ಯತೆ ಕುರಿತು ಮಾಹಿತಿ ಲಭಿಸುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಗುಂಡಿಗಳಿಗೆ ಡಾಂಬಾರು ತುಂಬಿದ್ದಾರೆ. ಭಾನುವಾರ ಮಧ್ಯಾಹ್ನದ ವೇಳೆಗೆ ಗುಂಡಿ ಮುಚ್ಚಿಸಿದ್ದಾರೆ.
ಇದನ್ನೂ ಓದಿ | ನಾಲ್ಕು ರೈಲ್ವೆ ಮೇಲ್ಸೇತುವೆ, ಶಿವಮೊಗ್ಗ ಸಂಸದರಿಂದ ಕಾಮಗಾರಿ ಪರಿಶೀಲನೆ, ಎಲ್ಲೆಲ್ಲಿ ಎಷ್ಟಾಗಿದೆ ಕೆಲಸ?
ಸದ್ಯ ತುಂಗಾ ನದಿ ಹೊಸ ಸೇತುವೆ ಮೇಲೆ ವಾಹನ ಸವಾರರು ನಿರಾಳವಾಗಿ ಸಂಚರಿಸಬಹುದಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200